ಸಚಿವ ಸಂಪುಟ ವಿಸ್ತರಣೆ ಸುಲಭ ಆದರೆ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ತುಂಬಾ ಕಷ್ಟ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಗಳವಾರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯೋತ್ಸವ ಪ್ರಶಸ್ತಿ ಕೋರಿ 3ಸಾವಿರಕ್ಕೂ ಅಧಿಕ ಅರ್ಜಿಗಳು ಬಂದಿವೆ. ಇದನ್ನು ಪರಿಷ್ಕರಿಸಿ ಪ್ರಶಸ್ತಿ ಪುರಸ್ಕೃತರ ಸಂಖ್ಯೆಯನ್ನು ಕಡಿಮೆಗೊಳಿಸಿ 80ರೊಳಗೆ ನಿಗದಿಗೊಳಿಸಲಾಗುವುದು ಎಂದರು.
ಆದರೆ ಇದರಲ್ಲಿ ಯಾವುದೇ ರಾಜಕೀಯ ಒತ್ತಡಕ್ಕೆ ಒಳಗಾಗುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ ಅವರು, ಸಚಿವ ಸಂಪುಟ ವಿಸ್ತರಣೆ ಸುಲಭ, ಪ್ರಶಸ್ತಿ ಆಯ್ಕೆ ಕಷ್ಟ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಚಿವರುಗಳಾದ ಡಾ.ವಿ.ಎಸ್.ಆಚಾರ್ಯ, ರಾಮಚಂದ್ರೇ ಗೌಡ, ಅರವಿಂದ ಲಿಂಬಾವಳಿ, ಹಾಲಪ್ಪ ಹಾಜರಿದ್ದರು. |