ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಮಹೇಂದ್ರ ಪ್ರಾಯೋಜಕತ್ವದಲ್ಲಿ ಕೈದಿಗಳ ಕಬಡ್ಡಿ !
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಮಹೇಂದ್ರ ಪ್ರಾಯೋಜಕತ್ವದಲ್ಲಿ ಕೈದಿಗಳ ಕಬಡ್ಡಿ !
ಚರ್ಚ್ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿರುವ ರಾಜ್ಯ ಬಜರಂಗದಳದ ಮಾಜಿ ಸಂಚಾಲಕ ಮಹೇಂದ್ರ ಕುಮಾರ್ ಜೈಲಿನಲ್ಲಿ ಸುಮ್ಮನೆ ಕುಳಿತಿಲ್ಲ. ದೀಪಾವಳಿಯಂದು ಕಬಡ್ಡಿ ಪಂದ್ಯಾಟವನ್ನು ಪ್ರಾಯೋಜಿಸುವ ಮೂಲಕ ವಿಚಾರಣಾಧೀನ ಕೈದಿಗಳ ಜೊತೆ ದೀಪಾವಳಿ ಹಬ್ಬ ಆಚರಿಸಿದರು.

ಮಹೇಂದ್ರ ಕುಮಾರ್ ಬಂಧನದ ಬಳಿಕ ಜೈಲಿನಲ್ಲಿ ಮುಸ್ಲಿಂ ಕೈದಿಗಳಿಗೆ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪವನ್ನು ನಿವಾರಿಸುವ ನಿಟ್ಟಿನಲ್ಲಿ ಈ ಯತ್ನ ಮಾಡಲಾಗುತ್ತಿದೆ ಎಂಬ ಮಾತು ಕೇಳಿ ಬರುತ್ತಿದೆ.

ಸ್ವಾಮಿ ವಿವೇಕಾನಂದ ಮತ್ತು ಕಿತ್ತೂರು ಚೆನ್ನಮ್ಮ ಎಂಬ ಎರಡು ವಿಜೇತ ತಂಡಗಳಿಗೆ ಪ್ರಶಸ್ತಿ ನೀಡಲಾಯಿತು. ಪ್ರಶಸ್ತಿಯನ್ನು ಪತ್ರಕರ್ತರಾದ ಹಿಲರಿ ಕ್ರಾಸ್ತಾ ಮತ್ತು ಮಹಮದ್ ಆರಿಫ್ ಟ್ರೋಫಿ ನೀಡಿದರು.

ಕಳೆದ ಕೆಲವು ದಿನಗಳಿಂದ ಮುಸ್ಲಿಂ ಕೈದಿಗಳಿಗೆ ಹಿಂದೂಗಳು ಕಿರುಕುಳ ನೀಡುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಇತ್ತೀಚೆಗಷ್ಟೆ ಮುಸ್ಲಿಂ ಸಂಘಟನೆಯ ನಿಯೋಗ ಜೈಲಿಗೆ ಭೇಟಿ ನೀಡಿತ್ತು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಬೆಳಗಾವಿ: ಉಗ್ರರಿಗಾಗಿ ತೀವ್ರ ಶೋಧ
ದೀಪಾವಳಿ: ಗಾಯಗೊಂಡವರ ಸಂಖ್ಯೆ ನೂರಕ್ಕೆ
ಕಾರ್ಕಳಕ್ಕೆ ನಕ್ಸಲ್ ತಂಡ ಭೇಟಿ
ರಾಜಕೀಯ ತೀರ್ಮಾನಕ್ಕೆ ಬೆಂಬಲವಿಲ್ಲ: ಜೆಡಿಎಸ್
ಶಾಸ್ತ್ರೀಯ ಸ್ಥಾನ: ನ.3ರಂದು ಧರಣಿ-ಕಸಾಪ
ಹೊರಟ್ಟಿಗೆ ಜೆಡಿಎಸ್ ಅಧ್ಯಕ್ಷ ಪಟ್ಟ ?