ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಚುನಾವಣೆ: ಕಾಂಗ್ರೆಸ್–ಬಿಜೆಪಿಗೆ ಪ್ರತಿಷ್ಠೆಯ ಕಣ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಚುನಾವಣೆ: ಕಾಂಗ್ರೆಸ್–ಬಿಜೆಪಿಗೆ ಪ್ರತಿಷ್ಠೆಯ ಕಣ
ಕೊಡಗು, ಅವಿಭಜಿತ ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನಪರಿಷತ್ತಿಗೆ ನಡೆಯುತ್ತಿರುವ ಚುನಾವಣೆಗೆ ರಾಜಕೀಯ ಪಕ್ಷಗಳಿಂದ ಬಿರುಸಿನ ಸ್ಪರ್ಧೆ ಆರಂಭವಾಗಿದೆ.

ಕೊಡಗು ಜಿಲ್ಲೆಯಲ್ಲಿ ಅರುಣ್ ಮಾಚಯ್ಯ, ಬೆಳಗಾವಿ ಜಿಲ್ಲೆಯಲ್ಲಿ ಸತೀಶ್ ಜಾರಕಿಹೊಳಿ ಹಾಗೂ ಧಾರವಾಡದಲ್ಲಿ ಬಸವರಾಜ್ ಬೊಮ್ಮಾಯಿ ಅವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಗಳಿಗೆ ನಾಳೆ(31) ಚುನಾವಣೆ ನಡೆಯಲಿದೆ.

ಈ ಮೂರು ಮಂದಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಹಿನ್ನೆಲೆಯಲ್ಲಿ ಪರಿಷತ್ತಿನ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದರು.

ಇದರಲ್ಲಿ ಜೆಡಿಎಸ್‌‌ನಿಂದ ಸ್ಪರ್ಧಿಸಿದ್ದ ಅರುಣ್ ಮಾಚಯ್ಯ ಸೋಲನ್ನು ಅನುಭವಿಸಿದ್ದರೆ, ಬಿಜೆಪಿಯಿಂದ ಸ್ಪರ್ಧಿಸಿದ್ದ ಬಸವರಾಜ್ ಬೊಮ್ಮಾಯಿ ಮತ್ತು ಕಾಂಗ್ರೆಸ್‌‌ನಿಂದ ಸತೀಶ್ ಜಾರಕಿಹೊಳಿ ಅವರು ಆಯ್ಕೆಯಾಗಿದ್ದರು.

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದೆ. ಈ ನಿಟ್ಟಿನಲ್ಲಿ ಸರ್ಕಾರಕ್ಕೆ ಇದು ಪ್ರತಿಷ್ಠೆಯ ಚುನಾವಣೆಯಾಗಿದೆ. ಅದೇ ರೀತಿ ಕಾಂಗ್ರೆಸ್‌‌ನಲ್ಲಿಯೂ ನೂತನ ಅಧ್ಯಕ್ಷ ಆರ್.ವಿ. ದೇಶಪಾಂಡೆ ಹಾಗೂ ಕಾರ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಎದುರಿಸುತ್ತಿರುವ ಮೊದಲ ಚುನಾವಣೆ ಇದಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೂ ಇದು ಸವಾಲಿನ ಪ್ರಶ್ನೆಯಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಶಂಕಿತ ಉಗ್ರ ನವೀದ್ ಸಿಲಿಂಡರ್ ಬಾಂಬ್ ತಜ್ಞ !
ಕುಮಾರಸ್ವಾಮಿ ವಿರುದ್ಧ ಮುಂದಿನ ವಾರ ಕೇಸು
ಮತ್ತೆ ತಲೆನೋವು ತಂದ ರಾಜ್ಯೋತ್ಸವ ಪ್ರಶಸ್ತಿ !
ಕಾಂಗ್ರೆಸ್ ಸೋಲು ಪತ್ತೆಗೆ ಸಮಿತಿ: ಡಿಕೆಶಿ
ಮಹೇಂದ್ರ ಪ್ರಾಯೋಜಕತ್ವದಲ್ಲಿ ಕೈದಿಗಳ ಕಬಡ್ಡಿ !
ಬೆಳಗಾವಿ: ಉಗ್ರರಿಗಾಗಿ ತೀವ್ರ ಶೋಧ