ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಬೆಳ್ಳುಬ್ಬಿಗೆ ವಿದ್ಯುತ್ ಕಾರ್ಖಾನೆ ಅಧ್ಯಕ್ಷಗಾದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಬೆಳ್ಳುಬ್ಬಿಗೆ ವಿದ್ಯುತ್ ಕಾರ್ಖಾನೆ ಅಧ್ಯಕ್ಷಗಾದಿ
ಸಚಿವ ಸ್ಥಾನದಿಂದ ಪದಚ್ಯುತಿಗೊಂಡಿದ್ದ ಬಸವನ ಬಾಗೇವಾಡಿ ಕ್ಷೇತ್ರದ ಶಾಸಕ ಎಸ್.ಕೆ.ಬೆಳ್ಳುಬ್ಬಿ ಅವರು ಕರ್ನಾಟಕ ವಿದ್ಯುತ್ ಕಾರ್ಖಾನೆಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಈ ಬಗ್ಗೆ ಯಾವುದೇ ಮುನ್ಸೂಚನೆ ನೀಡದ ಬೆಳ್ಳುಬ್ಬಿ ಅವರು ಶುಕ್ರವಾರ ಸದ್ದಿಲ್ಲದೆ ಅಧ್ಯಕ್ಷ ಹುದ್ದೆಯ ಅಧಿಕಾರ ವಹಿಸಿಕೊಂಡಿದ್ದರು. ಯಾವುದಾದರೊಂದು ನಿಗಮ-ಮಂಡಳಿಯ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಒತ್ತಡ ಹೇರಿದ್ದರಿಂದ ಬೆಳ್ಳುಬ್ಬಿ ಅವರು ಮಣಿಯಬೇಕಾಯಿತು ಎಂದು ಪಕ್ಷದ ಮೂಲಗಳು ತಿಳಿಸಿವೆ.

ತಮ್ಮನ್ನು ಸಚಿವ ಸ್ಥಾನದಿಂದ ಕೆಳಗಿಳಿಸಿದ್ದರಿಂದ ಬೇಸರಗೊಂಡಿದ್ದ ಬೆಳ್ಳುಬ್ಬಿ ಅವರಿಗೆ ಈ ಹಿಂದೆಯೇ ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವಂತೆ ಒತ್ತಡ ಹೇರಲಾಗಿತ್ತು. ಆದರೆ ಬೆಳ್ಳುಬ್ಬಿ ಅದನ್ನು ನಿರಾಕರಿಸಿದ್ದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಚುನಾವಣೆ: ಕಾಂಗ್ರೆಸ್–ಬಿಜೆಪಿಗೆ ಪ್ರತಿಷ್ಟೆಯ ಕಣ
ಶಂಕಿತ ಉಗ್ರ ನವೀದ್ ಸಿಲಿಂಡರ್ ಬಾಂಬ್ ತಜ್ಞ !
ಕುಮಾರಸ್ವಾಮಿ ವಿರುದ್ಧ ಮುಂದಿನ ವಾರ ಕೇಸು
ಮತ್ತೆ ತಲೆನೋವು ತಂದ ರಾಜ್ಯೋತ್ಸವ ಪ್ರಶಸ್ತಿ !
ಕಾಂಗ್ರೆಸ್ ಸೋಲು ಪತ್ತೆಗೆ ಸಮಿತಿ: ಡಿಕೆಶಿ
ಮಹೇಂದ್ರ ಪ್ರಾಯೋಜಕತ್ವದಲ್ಲಿ ಕೈದಿಗಳ ಕಬಡ್ಡಿ !