ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಶಾಸ್ತ್ರೀಯ ಸ್ಥಾನ-ರಾಜಕೀಯ ಬೇಡ: ಸದಾನಂದ ಗೌಡ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಶಾಸ್ತ್ರೀಯ ಸ್ಥಾನ-ರಾಜಕೀಯ ಬೇಡ: ಸದಾನಂದ ಗೌಡ
ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ನೀಡುವ ನಿಟ್ಟಿನಲ್ಲಿ ದೆಹಲಿಗೆ ತೆರಳಲಿರುವ ಸರ್ವಪಕ್ಷಗಳ ನಿಯೋಗದ ಜತೆ ತಾವು ತೆರಳುವುದಿಲ್ಲ ಎಂಬ ಪ್ರತಿಪಕ್ಷಗಳ ಹೇಳಿಕೆಯನ್ನು ಕಟುವಾಗಿ ಖಂಡಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಡಿ.ವಿ.ಸದಾನಂದ ಗೌಡ, ಈ ರೀತಿಯ ಬಹಿಷ್ಕಾರ ಪ್ರಜಾಪ್ರಭುತ್ವಕ್ಕೆ ಅವಮಾನ ಎಸಗಿದಂತೆ ಎಂದು ಹೇಳಿದ್ದಾರೆ.

ಅವರು ಶುಕ್ರವಾರ ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ, ರಾಜ್ಯದ ಹಿತದೃಷ್ಟಿಯಿಂದ ಎಲ್ಲರೂ ಪಕ್ಷಾತೀತವಾಗಿ ಒಗ್ಗಟ್ಟಾಗಬೇಕು. ಅದನ್ನು ಬಿಟ್ಟು ರಾಜಕೀಯ ಮಾಡುವುದು ಕಾಂಗ್ರೆಸ್ ಮತ್ತು ಜೆಡಿಎಸ್‌ಗೆ ಶೋಭೆ ತರುವಂತಹದ್ದಲ್ಲ ಎಂದು ಕಿವಿಮಾತು ಹೇಳಿದರು.

ಸಮಯ, ಸಂದರ್ಭ ನೋಡಿಕೊಂಡು ಪ್ರತಿಪಕ್ಷಗಳು ರಾಜಕೀಯ ಮಾಡಬೇಕು, ರಾಜ್ಯದ ಹಿತ ಬಂದಾಗ ನಮ್ಮಲ್ಲಿರುವ ವೈಷಮ್ಯವನ್ನು ಮರೆತು ಎಲ್ಲರೂ ಒಗ್ಗೂಡಬೇಕು ಎಂದು ಸಲಹೆ ನೀಡಿದರು.

ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ದೊರೆಯಬೇಕು ಎನ್ನುವುದು ಸಮಸ್ತ ಕನ್ನಡಿಗರ ಕನಸು, ಅದು ನನಸಾಗಬೇಕಾದರೆ, ಜನಪ್ರತಿ ನಿಧಿಗಳು ಎಲ್ಲರೂ ಒಗ್ಗಟ್ಟಾಗಬೇಕು.

ಆದ್ದರಿಂದ ದೆಹಲಿಗೆ ತೆರಳುವ ಸರ್ವಪಕ್ಷಗಳ ನಿಯೋಗವನ್ನು ಬಹಿಷ್ಕಾರ ಮಾಡುವುದು ಸರಿಯಲ್ಲ, ಬಹಿಷ್ಕಾರ ಮಾಡಿದಲ್ಲಿ ಅದು ಕನ್ನಡಿಗರಿಗೆ, ಕನ್ನಡ ನೆಲಕ್ಕೆ ಮಾಡುವ ದ್ರೋಹವಾಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ ಆಯ್ಕೆ
ವಿಧಾನಪರಿಷತ್ ಚುನಾವಣೆ: ನೀರಸ ಮತದಾನ
ಗಡಿವಿವಾದ: ಜಂಟಿ ಸಮೀಕ್ಷೆಗೆ ಖರ್ಗೆ ಆಗ್ರಹ
ಬೆಂಗಳೂರು: ಐಟಿ ಮೇಳಕ್ಕೆ ಮೋದಿ
ಪಾಟೀಲ್ ಪುಟ್ಟಪ್ಪಗೆ ನೃಪತುಂಗ ಪ್ರಶಸ್ತಿ
ಸಾಧ್ವಿ ಪ್ರಾಗ್ಯಾಗೆ ಬೆಂಗಳೂರಿನಲ್ಲಿ ಮಂಪರು ಪರೀಕ್ಷೆ