ಕನ್ನಡದ ಸರ್ವಾಂಗೀಣ ಅಭಿವೃದ್ಧಿಗಾಗಿ ಪ್ರತಿವರ್ಷ 25ಕೋಟಿ ರೂ.ಗಳನ್ನು ಮೀಸಲಿಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.
ಕನ್ನಡದ ನೆಲ-ಜಲ,ಭಾಷೆ ಅಭಿವೃದ್ಧಿಗಾಗಿ ಪ್ರತಿವರ್ಷ 25ಕೋಟಿ ರೂ.ನೀಡುವುದಾಗಿ ಅವರು ಹೇಳಿದರು. ರಾಜ್ಯದ ಎಲ್ಲ ವಿಶ್ವವಿದ್ಯಾನಿಲಯಗಳಲ್ಲಿನ ಕನ್ನಡ ಅಧ್ಯಯನ ಕೇಂದ್ರಗಳ ಚಟುವಟಿಕೆಗಾಗಿ ಪ್ರತಿವರ್ಷ 2ಕೋಟಿ ರೂ.ಮೀಸಲಿರಿಸುವುದಾಗಿ ಯಡಿಯೂರಪ್ಪ ಹೇಳಿದರು.
ಅಲ್ಲದೇ ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ದೊರಕಿಸಿಕೊಟ್ಟ ಕೇಂದ್ರ ಸರ್ಕಾರದ ಕ್ರಮಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಿದರು.
ಹಾಗೆಯೇ ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ನೀಡಿದಂತೆಯೇ, ಹೈದರಾಬಾದ್ ಕರ್ನಾಟಕ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಬೇಕು, ಸಂವಿಧಾನದ 371ಡಿ ವಿಧಿಗೆ ತಿದ್ದುಪಡಿ ತರಲು ವಿಶೇಷ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು. |