ಜೆಡಿಎಸ್ನ ಕೆಲವು ಮುಖಂಡರು ಮಂಗಳವಾರ ಇಂಧನ ಸಚಿವ ಈಶ್ವರಪ್ಪನವರೊಂದಿಗೆ ಮಾತುಕತೆ ನಡೆಸಿದ್ದು, ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
ಜೆಡಿಎಸ್ ಮುಖಂಡರಾದ ಇಕ್ಬಾಲ್ ಅನ್ಸಾರಿ, ಚೆಲುವರಾಯ ಸ್ವಾಮಿ, ಆಲ್ಕೋಡ್ ಹನುಮಂತಪ್ಪ ಸೇರಿದಂತೆ ಮೂರು ಮಂದಿ ಜಿಲ್ಲೆಯ ಪ್ರವಾಸಿ ಮಂದಿರದಲ್ಲಿ ಸಚಿವರನ್ನು ಭೇಟಿ ಮಾಡಿದ್ದು, ಸುದೀರ್ಘ ಮಾತುಕತೆ ನಡೆಸಿದ್ದಾರೆ.
ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವನ್ನು ಸಾಧಿಸಿರುವ ಹಿನ್ನೆಲೆಯಲ್ಲಿ ಈ ಭೇಟಿಗೆ ಮಹತ್ವ ಬಂದಿದೆ. ನಾಯಕರುಗಳು ಪ್ರಸ್ತುತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. |