ಕಳೆದ ಸಮ್ಮಿಶ್ರ ಸರ್ಕಾರದ ಲೋಕೋಪಯೋಗಿ ಇಲಾಖೆಯಲ್ಲಿನ ಎಂಜಿನಿಯರ್ಗಳ ನೇಮಕಾತಿಯಲ್ಲಿ ನಡೆದಿರುವ ಅಕ್ರಮ ಕುರಿತು ಲೋಕಾಯುಕ್ತ ತನಿಖೆ ಎದುರಿಸಲು ನಾನು ಸಿದ್ದ ಎಂದು ಕೆಎಂಎಫ್ ಅಧ್ಯಕ್ಷ ಎಚ್.ಡಿ.ರೇವಣ್ಣ ತಿಳಿಸಿದ್ದಾರೆ.
ನಾನು ಲೋಕೋಪಯೋಗಿ ಸಚಿವನಾಗಿದ್ದ ವೇಳೆ 500 ಎಂಜಿನಿಯರ್ಗಳ ನೇಮಕಾತಿಗೆ ಸಂಬಂಧಿಸಿದಂತೆ ಹಣಕಾಸು ಇಲಾಖೆಗೆ ಪ್ರಸ್ತಾಪ ಸಲ್ಲಿಸಲಾಗಿತ್ತು. ಉಪ ಉಪಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರೂ ಆಗಿದ್ದ ಬಿ.ಎಸ್.ಯಡಿಯೂರಪ್ಪ ಅವರು ನೇಮಕಾತಿಗೆ ಅನುಮೋದನೆ ನೀಡಿದ್ದಾರೆ.
ಅವರು ಅನುಮೋದನೆ ನೀಡದಿದ್ದರೆ ನೇಮಕಾತಿಯೇ ಆಗುತ್ತಿರಲಿಲ್ಲ, ಈಗ ತನಿಖೆಯ ಅಗತ್ಯವೂ ಇರಲಿಲ್ಲ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.
ನೇಮಕಾತಿಗೆ ಸಂಬಂಧಿಸಿದಂತೆ ಯಾವುದಾದರೂ ಸಮಸ್ಯೆಯಿದ್ದರೆ, ಹಿಂದಿನ ಸರ್ಕಾರದ ಅವಧಿಯಲ್ಲೇ ಪ್ರಸ್ತಾಪಿಸಬೇಕಿತ್ತು. ಸರ್ಕಾರದಲ್ಲಿ ಬಿಜೆಪಿ ಸಚಿವರಾದರೂ ಇದನ್ನು ಪ್ರಶ್ನಿಸಬೇಕಿತ್ತು ಎಂದರು. |