ಪ್ರಖ್ಯಾತ ಹಿಂದೂಸ್ಥಾನಿ ಸಂಗೀತ ದಿಗ್ಗಜ ಪಂಡಿತ್ ಭೀಮ್ಸೇನ್ ಜೋಷಿ ಅವರಿಗೆ ದೇಶದ ಅತ್ಯುನ್ನತ ಪೌರ ಪ್ರಶಸ್ತಿಯಾದ ಭಾರತ ರತ್ನ ಪ್ರಶಸ್ತಿಗೆ ಆಯ್ಕೆಯಾಗಿರುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದ್ದಾರೆ.
ಕನ್ನಡಕ್ಕೆ ಶಾಸ್ತ್ರೀಯ ಸ್ಥಾನ ಸಿಕ್ಕಿರುವ ಬೆನ್ನಲ್ಲೆ ಸಂಗೀತ ಕ್ಷೇತ್ರದಲ್ಲಿ ಗೌರಿಶಂಕರದಷ್ಟು ಎತ್ತರಕ್ಕೆ ಬೆಳದಿರುವ ಭೀಮಸೇನ್ ಜೋಷಿ ಅವರಿಗೆ ಈ ಪ್ರಶಸ್ತಿ ಲಭಿಸಿರುವುದು ಕರ್ನಾಟಕಕ್ಕೆ ಮತ್ತೊಂದು ಗರಿ ಮೂಡಿಸಿದಂತಾಗಿದೆ ಎಂದು ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಡಾ. ಗಂಗೂಬಾಯಿ ಹಾನಗಲ್. ನಾವಿಬ್ಬರೂ ಒಂದೇ ಗುರುವಿನಲ್ಲಿ ಒಟ್ಟಿಗೆ ಸಂಗೀತ ಕಲಿತಿದ್ದರಿಂದ ಪ್ರಶಸ್ತಿ ಪಡೆದಿರುವ ಬಗ್ಗೆ ಹೆಮ್ಮೆ ಎನಿಸುತ್ತದೆ. ಕರ್ನಾಟಕದವರಿಗೆ ಈ ಪ್ರಶಸ್ತಿ ಬಂದಿರುವುದು ನಿಜಕ್ಕೂ ಖುಷಿ ತಂದಿದೆ ಎಂದಿದ್ದಾರೆ. |