75ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಚಿತ್ರದುರ್ಗದಲ್ಲಿ ನಡೆಸಲು ಕನ್ನಡ ಸಾಹಿತ್ಯ ಪರಿಷತ್ ನಿರ್ಧರಿಸಿರುವುದಾಗಿ ತಿಳಿಸಿದೆ.
ಈ ಕುರಿತು ನಗರದಲ್ಲಿ ಬುಧವಾರ ಮಾಹಿತಿ ನೀಡಿದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಲ್ಲೂರು ಪ್ರಸಾದ್, 75ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಚಿತ್ರದುರ್ಗದಲ್ಲಿ ನಡೆಸುವುದೆಂದು ತೀರ್ಮಾನಿಸಲಾಗಿದ್ದು, ದಿನಾಂಕವನ್ನು ನಿಗದಿಪಡಿಸಲಾಗಿದೆ ಎಂದಿದ್ದಾರೆ.
ಈ ನಿಟ್ಟಿನಲ್ಲಿ ಮುಂದಿನ ವರ್ಷದ ಜನವರಿ 29 ರಿಂದ ಫೆಬ್ರವರಿ 1ರವರೆಗೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ. 75ರ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅದ್ದೂರಿಯಾಗಿ ನಿರ್ವಹಿಸಲು ನಿರ್ಧರಿಸಿದ್ದು, ಈ ಕುರಿತು ಸಮಿತಿಯೊಂದನ್ನು ರಚಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು. |