ಮುಂಬರುವ ಉಪಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಅವರು ಬುಧವಾರ ಸುದ್ದಿಗಾರರೊಂದಿಗೆ ಮಾತನಾಡುತ್ತ, ಕಾಂಗ್ರೆಸ್ ಸೇರಿದಂತೆ ಇತರ ಯಾವುದೇ ಪಕ್ಷಗಳ ಜತೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ, ವಿಧಾನಸಭೆ ಉಪಚುನಾವಣೆಯಲ್ಲಿ ಎಲ್ಲಾ ಕ್ಷೇತ್ರಗಳಿಗೂ ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತೇವೆ.
ತಮ್ಮ ಪಕ್ಷದಲ್ಲಿ ನಾಯಕರ ಕೊರತೆ ಇದೆಯೇ ಹೊರತು ಕಾರ್ಯಕರ್ತರ ಕೊರತೆ ಇಲ್ಲ. ಆದರೆ, ತಮ್ಮ ಪಕ್ಷದಲ್ಲಿ ನೂರಾರು ಕಾರ್ಯಕರ್ತರನ್ನು ಸೃಷ್ಟಿಸುವ ಕೊರತೆ ಇದೆ ಎಂದು ಹೇಳಿದರು.
ವಿಧಾನಪರಿಷತ್ ಉಪಚುನಾವಣೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಹಣದ ಹೊಳೆ ಹರಿಸಿದೆ ಎಂದು ಅವರು ಈ ಸಂದರ್ಭದಲ್ಲಿ ಆರೋಪಿಸಿದರು. |