ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಸೋಲಿನ ಪರಾಮರ್ಶೆ ಹಾಗೂ ಮುಂಬರುವ ವಿಧಾನಸಭಾ ಉಪಚುನಾವಣೆಗೆ ಕಾರ್ಯತಂತ್ರ ರೂಪಿಸುವ ನಿಟ್ಟಿನಲ್ಲಿ ಬುಧವಾರ ನಡೆದ ಕಾಂಗ್ರೆಸ್ ಪಕ್ಷದ ಮಹತ್ವದ ಸಭೆಯಲ್ಲಿ ಸಿದ್ದರಾಮಯ್ಯ ಗೈರುಹಾಜರಾಗಿರುವುದು ಹಲವು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿತು.
ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ಸಿದ್ದು ಪಾಲ್ಗೊಳ್ಳುತ್ತಿಲ್ಲ ಎಂಬುದಕ್ಕೆ ಇದು ಸ್ಪಷ್ಟ ನಿದರ್ಶನವಾಗಿತ್ತು. ಕೆಪಿಸಿಸಿ ಅಧ್ಯಕ್ಷಗಾದಿ ದೊರೆಯದ ಹಿನ್ನೆಲೆಯಲ್ಲಿ ಅತೃಪ್ತಗೊಂಡಿರುವ ಹಿನ್ನೆಲೆಯಲ್ಲಿ ಸಭೆಗೆ ಆಗಮಿಸಿರಲಿಲ್ಲ ಎಂಬುದು ಹಲವು ನಾಯಕರ ಅಭಿಮತ.
ಕಳೆದ ಕೆಲವು ತಿಂಗಳಿಂದ ಕಾಂಗ್ರೆಸ್ ನ ಹಲವು ಸಭೆಗೆ ಸಿದ್ದರಾಮಯ್ಯ ಭಾಗವಹಿಸದೆ ಇರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ಇತ್ತೀಚೆಗೆ ನಡೆದ ಕೆಪಿಸಿಸಿ ನೂತನ ಅಧ್ಯಕ್ಷರುಗಳ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಸಿದ್ದರಾಮಯ್ಯ ಪಾಲ್ಗೊಳ್ಳಲಿಲ್ಲ. ಇಂದು ನಡೆದ ಸಭೆಗೆ ಉಪಸ್ಥಿತರಿರುತ್ತಾರೆ ಎಂದು ಕಾಂಗ್ರೆಸ್ ನಾಯಕರು ಅಂದುಕೊಂಡಿದ್ದರೂ, ಹಾಜರಾಗದೆ ನಿರೀಕ್ಷೆ ಹುಸಿಗೊಳಿಸಿದರು. |