ಕಳೆದ ಸಮ್ಮಿಶ್ರ ಸರ್ಕಾರದ ಅವಧಿ ಸಂದರ್ಭದಲ್ಲಿ ಹೆಚ್.ಡಿ.ರೇವಣ್ಣ ಲೋಕೋಪಯೋಗಿ ಸಚಿವರಾಗಿದ್ದಾಗ ಎಂಜಿನಿಯರ್ಗಳ ನೇಮಕಾತಿಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಲೋಕಾಯುಕ್ತ ತನಿಖೆಗೆ ಆದೇಶಿಸಿ ಸರ್ಕಾರ ಬುಧವಾರ ಅಧಿಸೂಚನೆ ಹೊರಡಿಸಿದೆ.
ರೇವಣ್ಣ ಅವರು ಲೋಕೋಪಯೋಗಿ ಸಚಿವರಾಗಿದ್ದಾಗ 703 ಎಂಜಿನಿಯರ್ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲಾಗಿತ್ತು.
ಈ ನೇಮಕಾತಿ ಸಂದರ್ಭದಲ್ಲಿ ನಿರ್ದಿಷ್ಟ ಜಾತಿಗೆ ಸೇರಿದ ಅಭ್ಯರ್ಥಿಗಳಿಗೆ ಅನುಕೂಲ ಮಾಡಿಕೊಂಡಿರುವ ಉದ್ದೇಶದಿಂದ ಪರೀಕ್ಷೆಗಳಲ್ಲಿ ಅಕ್ರಮ ನಡೆಸಿ ಸ್ವಜನ ಪಕ್ಷಪಾತ,ಭ್ರಷ್ಟಾಚಾರ ನಡೆಸಲಾಗಿದೆ ಎಂಬ ವ್ಯಾಪಕ ದೂರುಗಳು ಸರ್ಕಾರಕ್ಕೆ ಬಂದಿದ್ದವು.
ಈ ದೂರುಗಳ ಹಿನ್ನೆಲೆಯಲ್ಲಿ ಸರ್ಕಾರ 1984ರ ಲೋಕಾಯುಕ್ತ ಕಾಯಿದೆ 7(2)ಯಡಿ ಎಂಜಿನಿಯರ್ ನೇಮಕಾತಿ ಅಕ್ರಮಗಳ ಬಗ್ಗೆ ತನಿಖೆಯನ್ನು ಲೋಕಾಯುಕ್ತಕ್ಕೆ ವಹಿಸಿ ಅಧಿಸೂಚನೆ ಹೊರಡಿಸಿದೆ. |