ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಆಳ್ವ ಹೇಳಿಕೆಯಲ್ಲಿ ಹುರುಳಿಲ್ಲ: ದೇಶಪಾಂಡೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಆಳ್ವ ಹೇಳಿಕೆಯಲ್ಲಿ ಹುರುಳಿಲ್ಲ: ದೇಶಪಾಂಡೆ
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಗಳನ್ನು ಹಣಕ್ಕೆ ಮಾರಲಾಗಿದೆ ಎಂಬ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಾರ್ಗರೇಟ್ ಆಳ್ವ ಹೇಳಿಕೆ ನಿರಾಧಾರ ಎಂದು ಕೆಪಿಸಿಸಿ ಅಧ್ಯಕ್ಷ ಆರ್. ವಿ. ದೇಶಪಾಂಡೆ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನ್ನ ಪುತ್ರನಿಗೆ ಟಿಕೆಟ್ ಸಿಗಲಿಲ್ಲ ಎಂಬ ನೋವು ಅವರಿಗೆ ಇರಬಹುದು. ಟಿಕೆಟ್ ನೀಡಿಕೆಗೆ ಅದರದೇ ಆದ ಮಾನದಂಡವಿರುತ್ತದೆ ಎಂದು ಸ್ಪಷ್ಟಪಡಿಸಿದರು.

ಅಲ್ಲದೆ, ಟಿಕೆಟ್ ಹಂಚಿಕೆಯಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದೂ ಅವರು ಹೇಳಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಮಾರ್ಗರೇಟ್ ಆಳ್ವ ಅವರ ಪುತ್ರ ಹಾಗೂ ಕೇಂದ್ರ ಸಚಿವ ಸಿ.ಕೆ. ಜಾಫರ್ ಶರೀಫ್ ಮೊಮ್ಮಗನಿಗೆ ಟಿಕೆಟ್ ನೀಡುವ ಕುರಿತು ಚಿಂತನೆ ನಡೆಸಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಹೊಗೇನಕಲ್: ಕೇಂದ್ರದ ಮಧ್ಯಸ್ತಿಕೆಗೆ ಸಿಎಂ ಆಗ್ರಹ
ಆಳ್ವರಿಗೆ ಮಾತಿನ ಮೇಲೆ ಹಿಡಿತವಿರಲಿ: ಖರ್ಗೆ
ದಲಿತ ಸಹಭೋಜನ: ಪೇಜಾವರ ಶ್ರೀಗಳಿಗೆ ಸವಾಲು
ಅದ್ದೂರಿ ಕನಕ ಜಯಂತಿಗೆ ಸಿದ್ಧತೆ: ಕರಂದ್ಲಾಜೆ
ಎಲ್ಲಾ ತಾಲೂಕುಗಳಿಗೂ ನಿರಂತರ ವಿದ್ಯುತ್: ಈಶ್ವರಪ್ಪ
ಮಂಗಳೂರು ಕಾಲೇಜಿಗೆ ಅಡಿಗರ ಕೊಡುಗೆ