ರಾಜ್ಯ ಹಾಲು ಉತ್ಪಾದಕರ ಒಕ್ಕೂಟದಲ್ಲಿ ಅವ್ಯವಹಾರ ನಡೆದಿರುವುದು ಮೇಲ್ನೋಟಕ್ಕೆ ಸಾಬೀತಾಗಿರುವ ಕಾರಣ ಅದನ್ನು ಕೂಡಲೇ ಸರ್ಕಾರ ತನ್ನ ಹಿಡಿತಕ್ಕೆ ಪಡೆಯಬೇಕೆಂದು ಬಿಜೆಪಿ ಅಗ್ರಹಿಸಿದೆ. ಸರ್ಕಾರಕ್ಕೆ ಸವಾಲು ಹಾಕುತ್ತಿರುವ ಕಾರಣ ಎಚ್.ಡಿ.ರೇವಣ್ಣ ಅವರನ್ನು ಅಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಬೇಕೆಂದು ಬಿಜೆಪಿ ವಕ್ತಾರ ವಿ.ಧನಂಜಯ ಕುಮಾರ್ ಆಗ್ರಹಿಸಿದ್ದಾರೆ. ಹಾಲು ಉತ್ಪಾದಕರಿಗೆ ನೆರವಾಗುವ ದೃಷ್ಟಿಯಿಂದ ಸರ್ಕಾರ ಪ್ರತೀ ಲೀಟರ್ಗೆ 2 ರೂ.ಗಳಂತೆ ಪ್ರೋತ್ಸಾಹಧನಕ್ಕಾಗಿ 582ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. ಇದರಿಂದ ಉತ್ಪಾದಕರಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಅವರು ಹೇಳಿದರು. ಗ್ರಾಹಕರಿಗೆ ತೊಂದರೆ ಮಾಡುವ ದೃಷ್ಟಿಯಿಂದ ರೇವಣ್ಣ ದರ ಏರಿಕೆಗೆ ಮುಂದಾಗಿದ್ದಾರೆ. ದರ ಏರಿಕೆ ಮಾಡುವುದು ಸರಿಯಲ್ಲ. ಗೌಡರು ಹಾಗೂ ಅವರ ಕುಟುಂಬಕ್ಕೆ ಇದು ಕೊನೆಯ ಎಚ್ಚರಿಕೆ. ಇದೇ ರೀತಿ ಮುಂದುವರಿದರೆ ಜನರೇ ಬುದ್ದಿ ಕಲಿಸುತ್ತಾರೆ ಎಂದು ಅವರು ಎಚ್ಚರಿಸಿದರು. |