ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಬಿಜೆಪಿ ಗಾಳ ಕಚ್ಚುತ್ತಿರುವ ಅಂಬರೀಷ್?
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಬಿಜೆಪಿ ಗಾಳ ಕಚ್ಚುತ್ತಿರುವ ಅಂಬರೀಷ್?
PTI
ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಸಿಕೊಂಡು 'ಆಪರೇಷನ್ ಕಮಲ'ಕ್ಕೆ ಮತ್ತೆ ಮುಂದಾಗಿರುವ ಬಿಜೆಪಿ, ಕಾಂಗ್ರೆಸ್ ಮುಖಂಡ ಅಂಬರೀಷ್ ಅವರಿಗೆ ಗಾಳ ಹಾಕಿದೆ.

ಈ ನಿಟ್ಟಿನಲ್ಲಿ ಈಗಾಗಲೇ ಬಿಜೆಪಿ ಮುಖಂಡರು ಅಂಬರಿಷ್ ಜೊತೆಯಲ್ಲಿ ಮೊದಲ ಸುತ್ತಿನ ಮಾತುಕತೆ ನಡೆಸಿದ್ದು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯಿಂದ ಕಣಕ್ಕಿಳಿಯುವ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಈ ಮೂಲಕ ಒಕ್ಕಲಿಗರ ಪ್ರಾಬಲ್ಯವಿರುವ ಹಳೆ ಮೈಸೂರು ಭಾಗದಲ್ಲಿ ತನ್ನ ಅಧಿಪತ್ಯ ಸಾಧಿಸಲು ಹೊರಟಿರುವ ಬಿಜೆಪಿ ಲೋಕಸಭಾ ಚುನಾವಣೆಗೂ ಮುನ್ನ ಅಂಬರೀಷ್ ಅವರನ್ನು ಪಕ್ಷಕ್ಕೆ ಕರೆಸಿಕೊಳ್ಳಲು ವೇದಿಕೆ ಸಿದ್ಧಗೊಳಿಸಿದೆ.

ಕಳೆದ ವಿಧಾನಸಭೆಯಲ್ಲಿ ಅಂಬರೀಷ್ ಅವರನ್ನು ಪಕ್ಷಕ್ಕೆ ಕರೆಸಿಕೊಳ್ಳುವ ನಿಮಿತ್ತ ಹಲವು ಮಾತುಕತೆಗಳು ನಡೆದಿದ್ದರೂ, ಯಾವುದೂ ಯಶಸ್ವಿಯಾಗಿರಲಿಲ್ಲ. ಆದರೆ ಚುನಾವಣೆಯಲ್ಲಿನ ಸೋಲು ಹಾಗೂ ಬಳಿಕ ಪಕ್ಷದಲ್ಲಿ ಮೂಲೆಗುಂಪಾಗಿರುವ ನೋವು ಅಂಬರಿಷ್‌ಗೆ ಇದೆ ಎಂದು ಅವರ ನಿಕಟವರ್ತಿಗಳು ಹೇಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಆಹ್ವಾನದತ್ತ ಅಂಬಿ ಒಲವು ತೋರಿದ್ದಾರೆ ಎನ್ನಲಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಪಕ್ಷ ಬಿಟ್ಟವರಿಗೆ ನೋ ಎಂಟ್ರಿ
ರೇವಣ್ಣರನ್ನು ಹೊರ ಹಾಕಿ
ಮ್ಯಾಗಿ: ಕೆಪಿಸಿಸಿಯಿಂದ ವಿವರಣೆ ಕೇಳಿದ ಹೈಕಮಾಂಡ್
ಕೆಎಂಎಫ್: ರೇವಣ್ಣನಿಗೆ ಬೆಂಬಲಕ್ಕೆ ಕುಮಾರ್
ಮಾರ್ಗರೆಟ್ ಹೇಳಿಕೆಗೆ ಸಿದ್ದು ಸಹಮತ
ಮ್ಯಾಗಿಗೆ ಗುತ್ತೇದಾರ್ ಬೆಂಬಲ