ದಾವಣಗೆರೆ: ಸಚಿವರ, ಅಧಿಕಾರಿಗಳ ಮಧ್ಯೆದಲ್ಲಿ ಶಾಸಕರನ್ನು ಕಡೆಗಣಿಸಲಾಗಿದೆ ಎಂದು ಹೊನ್ನಾಳಿ ಶಾಸಕ ರೇಣುಕಾಚಾರ್ಯ ಗಂಭೀರ ಆರೋಪ ಮಾಡಿದ್ದಾರೆ.ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವರಿಂದ ಮಾತ್ರವೇ ಸರ್ಕಾರ ನಡೆಯುವುದಿಲ್ಲ ಶಾಸಕರ ಅಗತ್ಯವೂ ಇದೆ. ಹಾಗಿದ್ದಲ್ಲಿ ಮಾತ್ರ ಆಡಳಿತ ನಡೆಸಲು ಸಾಧ್ಯ ಎಂದಿದ್ದಾರೆ.ಮಾತು ಮುಂದುವರಿಸಿದ ಶಾಸಕರು, ತಮಗೆ ಮುಖ್ಯಮಂತ್ರಿಗಳ ಮೇಲೆ ಅಪಾರ ನಂಬಿಕೆ ಇದೆ. ಆದರೆ ಶಾಸಕರನ್ನು ಇದೇ ರೀತಿ ಕಡೆಗೆಣಿಸಿದರೆ ಅಥವಾ ಶಾಸಕರ ಗೌರವಕ್ಕೆ ಧಕ್ಕೆಯಾದಲ್ಲಿ ಸುಮ್ಮನೆ ಕೂರುವುದಿಲ್ಲ ಎಂದೂ ಅವರು ಈ ಸಂದರ್ಭದಲ್ಲಿ ಎಚ್ಚರಿಕೆ ನೀಡಿದ್ದಾರೆ.ಈ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರು ಮಾತುಕತೆ ನಡೆಸಿದ್ದು, ಮುಂದಿನ ಕ್ರಮದ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ. |