ವಿಧಾನಸಭಾ ಉಪಚುನಾವಣೆಗೂ ಮುನ್ನ ರಾಜ್ಯ ಸಚಿವ ಸಂಪುಟ ಪುನರ್ ರಚನೆಯಾಗುವ ಸಂಭವವಿದ್ದು, ಪ್ರಮುಖ ಖಾತೆಗಳಲ್ಲಿ ಬದಲಾವಣೆಯಾಗುವ ಸಾಧ್ಯತೆಗಳಿವೆ.
ವಿಧಾನಸಭಾಧ್ಯಕ್ಷ ಜಗದೀಶ್ ಶೆಟ್ಟರ್ ಅವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆಗಳು ಹೆಚ್ಚಾಗಿದೆ. ಅಲ್ಲದೆ, ಆ ಸ್ಥಾನಕ್ಕೆ ಉಪಾಧ್ಯಕ್ಷ ಕೆ.ಜಿ. ಬೋಪಯ್ಯ ಅವರನ್ನು ನೇಮಕ ಮಾಡಲಾಗುವುದು ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಕಳೆದ ಐದು ತಿಂಗಳ ಆಡಳಿತದ ಬಗ್ಗೆ ತೀವ್ರ ಅಸಮಾಧಾನಗೊಂಡಿರುವ ಆರ್ಎಸ್ಎಸ್ ಬದಲಾವಣೆಗೆ ಬಿಜೆಪಿಯನ್ನು ಆಗ್ರಹಿಸಿದೆ. ಈ ನಿಟ್ಟಿನಲ್ಲಿ ಸಚಿವ ಸಂಪುಟ ಪುನರ್ ರಚನೆಗೆ ಸರ್ಕಾರ ಮುಂದಾಗಿದೆ.
ಗೃಹ ಖಾತೆ ನಿರ್ವಹಿಸುತ್ತಿರುವ ಡಾ. ವಿ.ಎಸ್. ಆಚಾರ್ಯ ಹಾಗೂ ಇಂಧನ ಖಾತೆ ಸಚಿವ ಕೆ.ಎಸ್. ಈಶ್ವರಪ್ಪ ಅವರ ಖಾತೆಗಳಲ್ಲಿ ಬದಲಾವಣೆಯಾಗುವ ಸಾಧ್ಯತೆಳಿವೆ ಎಂದು ಮೂಲಗಳು ಹೇಳಿವೆ. |