ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಸಿದ್ದರಾಮಯ್ಯ ನಿವಾಸಕ್ಕೆ ಡಿಕೆಶಿ ಭೇಟಿ !
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಸಿದ್ದರಾಮಯ್ಯ ನಿವಾಸಕ್ಕೆ ಡಿಕೆಶಿ ಭೇಟಿ !
ಮಹತ್ವದ ಬೆಳವಣಿಗೆಯೊಂದರಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಮಂಗಳವಾರ ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದು, ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಇಂದು ಸಿದ್ದರಾಮಯ್ಯ ನಿವಾಸಕ್ಕೆ ತೆರಳಿದ ಶಿವಕುಮಾರ್ ಪ್ರಸ್ತುತ ರಾಜಕೀಯ ಸನ್ನಿವೇಶಗಳ ಕುರಿತು ಮಾತುಕತೆ ನಡೆಸಿದ್ದು,ಸಿದ್ದರಾಮಯ್ಯ ಅವರ ಮನವೊಲಿಕೆಗೆ ಪ್ರಯತ್ನ ನಡೆಸಲಾಗಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಕಾಂಗ್ರೆಸ್ ನಾಯಕರ ಹಾಗೂ ಪಕ್ಷದ ಕುರಿತು ಸಿದ್ದರಾಮಯ್ಯನವರು ಕಳೆದ ಕೆಲವು ತಿಂಗಳಿಂದ ಅಸಮಾಧಾನಗೊಂಡಿದ್ದಲ್ಲದೆ, ಇತ್ತೀಚೆಗೆ ಮಾರ್ಗರೆಟ್ ಆಳ್ವ ಹೇಳಿಕೆಗೆ ಸಹಮತ ನೀಡಿ ವಿವಾದ ಸೃಷ್ಟಿಸಿದ್ದರು.

ಇದೇ ವೇಳೆ ಚುನಾವಣೆ ಕುರಿತು ಇಬ್ಬರು ನಾಯಕರು ಸುದೀರ್ಘ ಚರ್ಚೆ ನಡೆಸಿದ್ದು, ಮುಂದಿನ ಚುನಾವಣೆಯಲ್ಲಿ ಕಣಕ್ಕಿಳಿಸುವ ಅಭ್ಯರ್ಥಿಗಳ ಕುರಿತು ಸಿದ್ದರಾಮಯ್ಯ ಅವರ ಅಭಿಪ್ರಾಯ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಶೀಘ್ರವೇ ಸಂಸದ ಸ್ಥಾನಕ್ಕೆ ರಾಜೀನಾಮೆ: ಜಾಲಪ್ಪ
ಕೂಡಗಿಯಲ್ಲಿ ವಿದ್ಯುತ್ ಉತ್ಪಾದನೆಗೆ ಕೇಂದ್ರ ಅಸ್ತು
ಬೌದ್ದ ಧರ್ಮವನ್ನು ಟೀಕಿಸಿಲ್ಲ: ಪೇಜಾವರಶ್ರೀ
ವಲಸಿಗರಿಗಾಗಿ ತ್ಯಾಗಕ್ಕೆ ಸಿದ್ಧರಾಗಿ: ಸದಾನಂದಗೌಡ
ಕೆಎಂಎಫ್ ಮತ್ತೆ ಹೈಕೋರ್ಟ್‌ಗೆ ಮೊರೆ
ಆಳ್ವಾ ರಾಜೀನಾಮೆ ಸರಿಯಲ್ಲ: ಧರಂಸಿಂಗ್