ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ರಸ್ತೆ ಅಗಲೀಕರಣಕ್ಕೆ ಚಿಂತನೆ ನಡೆಸಿರುವುದಾಗಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರು ಬುಧವಾರ ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದ್ದಾರೆ.ನಗರದಲ್ಲಿ ಈಗಾಗಲೇ ವಾಹನ ದಟ್ಟಣೆ ವಿಪರೀತವಾಗುತ್ತಿದ್ದು, ಈ ಸಮಸ್ಯೆಯನ್ನು ಬಗೆಹರಿಸಲು ರಸ್ತೆ ಅಗಲೀಕರಣ ಅಗತ್ಯವಾಗಿರುವುದಾಗಿ ಅವರು ಹೇಳಿದರು.ಆ ಕಾರಣಕ್ಕಾಗಿಯೇ ನಗರದ 89ರಸ್ತೆಗಳ ಅಗಲೀಕರಣಕ್ಕೆ ನಿರ್ಧಾರ ಕೈಗೊಂಡಿರುವುದಾಗಿ ಈ ಸಂದರ್ಭದಲ್ಲಿ ತಿಳಿಸಿದ ಅವರು, ರಸ್ತೆ ಅಗಲೀಕರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ ಎಂದು ತಿಳಿಸಿದರು.ಸುಗಮ ಸಂಚಾರದ ದೃಷ್ಟಿಯಿಂದಾಗಿ ರಸ್ತೆ ಅಗಲೀಕರಣಕ್ಕೆ ಮುಂದಾಗಿರುವುದಾಗಿ ತಿಳಿಸಿದ ಕಟ್ಟಾ, ಜಾಗವನ್ನು ಒತ್ತುವರಿ ಮಾಡಿಕೊಂಡವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು. |