ಶಾಲಾ-ಕಾಲೇಜುಗಳಲ್ಲಿ ಮಿತಿಮೀರಿ ವಸೂಲಿ ಮಾಡುತ್ತಿರುವ ಡೊನೇಷನ್ ತಡೆಗೆ ನೂತನ ನೀತಿಯನ್ನು ಜಾರಿಗೆ ತರುವ ಕುರಿತು ಚಿಂತನೆ ನಡೆದಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಗುರುವಾರ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಜಾರಿಗೆ ತರುವ ವಂತಿಗೆ ನೀತಿಯನ್ನು ಪರಿಗಣಿಸಿ ನೂತನ ನೀತಿಯನ್ನು ಜಾರಿಗೆ ತರಲಾಗುವುದು ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು.
ಹೊಸ ನೀತಿ ರೂಪಿಸುವ ಬಗ್ಗೆ ಚರ್ಚೆ ನಡೆಯುತ್ತಿದ್ದು, ಇನ್ನು ಅಂತಿಮ ರೂಪ ನೀಡಿಲ್ಲ. ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷಾ ವ್ಯವಸ್ಥೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ ಅವರು, ಈ ಬಾರಿ ಹಳೇ ಮಾದರಿಯಲ್ಲೇ ನಡೆಯಲಿದೆ ಎಂದರು.
ಮುಂದಿನ ಸಾಲಿನ ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ ತರುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ ಎಂದ ಅವರು, ಈ ಬಾರಿ ಯಾವುದೇ ಲೋಪವಾಗದಂತೆ ನಡೆಸಲು ಸಿದ್ದತೆ ನಡೆಸಲಾಗುವುದು ಎಂದರು. |