ವಿವಾದಕ್ಕೆ ಎಡೆ ಮಾಡಿಕೊಟ್ಟಿರುವ ಗರುಡಮಾಲ್ ಬಹುಮಹಡಿ ಕಟ್ಟಡ ನಿರ್ಮಾಣದಲ್ಲಿ ನಡೆದಿರುವ ಅವ್ಯವಹಾರದ ಕುರಿತಂತೆ ಲೋಕಾಯುಕ್ತಕ್ಕೆ ತನಿಖೆ ನಡೆಸಲು ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು ಮಹಾನಗರ ಪಾಲಿಕೆಯ ಕೇಂದ್ರ ಕಾರ್ಯಗಾರ ಮತ್ತು ಉಗ್ರಾಣ ಪ್ರದೇಶದಲ್ಲಿ ಬಹುಮಹಡಿ ವಾಹನ ನಿಲ್ದಾಣ ಹಾಗೂ ವಾಣಿಜ್ಯ ಸಂಕೀರ್ಣ ನಿರ್ಮಿಸುವ ಮೆಗಾರಿಕ್ ಸಂಸ್ಥೆಗೆ ನೀಡಿದ್ದ ಪರವಾನಗಿ ಕುರಿತಂತೆ ಲೋಕಾಯುಕ್ತ ತನಿಖೆ ನಡೆಯಲಿದೆ.
ಮಹಾನಗರ ಪಾಲಿಕೆ ಹಾಗೂ ಮೆಗಾರಿಕ್ ಸಂಸ್ಥೆ ಜಂಟಿಯಾಗಿ ಈ ವಾಣಿಜ್ಯ ಸಂಕೀರ್ಣದ ನಿರ್ಮಾಣ ಕಾಮಗಾರಿ ಕೈಗೊಂಡಿತ್ತು. ಈ ಕಟ್ಟಡ ನಿರ್ಮಾಣವನ್ನು ಮೆಗಾರಿಕ್ ಸಂಸ್ಥೆಗೆ ವಹಿಸುವ ಬಗ್ಗೆ ಅವ್ಯವಹಾರ ನಡೆದಿದೆ ಎಂಬ ಬಗ್ಗೆ ಪ್ರತಿಪಕ್ಷದ ನಾಯಕರು ಆರೋಪ ಮಾಡಿರುವ ಹಿನ್ನೆಲೆಯಲ್ಲಿ ಸರ್ಕಾರ ಲೋಕಾಯುಕ್ತ ತನಿಖೆಗೆ ಆದೇಶಿಸಿದೆ. |