ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಆಳ್ವ ರಾಜೀನಾಮೆ ಅಂಗೀಕಾರ ಸರಿ: ಆಸ್ಕರ್
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಆಳ್ವ ರಾಜೀನಾಮೆ ಅಂಗೀಕಾರ ಸರಿ: ಆಸ್ಕರ್
PTI
ಮಾರ್ಗರೇಟ್ ಆಳ್ವ ಅವರ ರಾಜೀನಾಮೆಯನ್ನು ಸ್ವೀಕರಿಸಿರುವ ಪಕ್ಷದ ಕ್ರಮವನ್ನು ಸಮರ್ಥಿಸಿಕೊಂಡಿರುವ ಕೇಂದ್ರ ಕಾರ್ಮಿಕ ಸಚಿವ ಆಸ್ಕರ್ ಫರ್ನಾಂಡೀಸ್, ಇದು ಪಕ್ಷದ ನಿರ್ಧಾರ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರ್ಗರೇಟ್ ಅವರನ್ನು ರಾಜೀನಾಮೆ ನೀಡಿ ಎಂದು ಪಕ್ಷವೇನೂ ಕೇಳಿಕೊಂಡಿರಲಿಲ್ಲ. ಅವರಾಗಿಯೇ ರಾಜೀನಾಮೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ವಿಧಾನಸಭೆ ಲೋಕಸಭೆ ಹಾಗೂ ಯಾವುದೇ ಪಕ್ಷಕ್ಕೆ ಅದರದೇ ಆದ ವೇದಿಕೆ ಇರುತ್ತದೆ. ಅದನ್ನು ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಅದೇ ರೀತಿ ಇಲ್ಲಿಯೂ ಆಗಿದೆ ಎಂದು ಅವರು ವಿವರಣೆ ನೀಡಿದ್ದಾರೆ.

ಮಾರ್ಗರೇಟ್ ಆಳ್ವ ಅವರ ರಾಜೀನಾಮೆಯನ್ನು ಸ್ವೀಕರಿಸಿರುವುದು ಪಕ್ಷದ ಹೈಕಮಾಂಡ್ ನಿರ್ಧಾರವಾಗಿದ್ದು, ಈ ಬಗ್ಗೆ ರಕ್ಷಣಾ ಸಚಿವ ಎ.ಕೆ. ಆಂಟನಿ ನೇತೃತ್ವದಲ್ಲಿ ತನಿಖೆ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಪ್ರಥಮ ಪಿಯುಸಿಗೆ ಪಬ್ಲಿಕ್ ಪರೀಕ್ಷೆ ಇಲ್ಲ: ಹೆಗಡೆ
ಗರುಡಮಾಲ್ ಪ್ರಕರಣ ಲೋಕಾಯುಕ್ತ ತನಿಖೆಗೆ
ಡೊನೇಷನ್ ತಡೆಗೆ ನೂತನ ನೀತಿ: ಕಾಗೇರಿ
'ನಂದಗುಡಿ' ಲೋಕಾಯುಕ್ತ ತನಿಖೆಗೆ
ಟಿಕೆಟ್ ಮಾರಾಟ: ಕಾಗೋಡು ಮಂಪರು ಪರೀಕ್ಷೆಗೆ ಆಗ್ರಹ
ಕೆಎಂಎಫ್: ಸರ್ಕಾರದ ವಿವರಣೆ ಕೋರಿದ ಹೈಕೋರ್ಟ್