ಮಾರ್ಗರೇಟ್ ಆಳ್ವ ಅವರ ರಾಜೀನಾಮೆಯನ್ನು ಸ್ವೀಕರಿಸಿರುವ ಪಕ್ಷದ ಕ್ರಮವನ್ನು ಸಮರ್ಥಿಸಿಕೊಂಡಿರುವ ಕೇಂದ್ರ ಕಾರ್ಮಿಕ ಸಚಿವ ಆಸ್ಕರ್ ಫರ್ನಾಂಡೀಸ್, ಇದು ಪಕ್ಷದ ನಿರ್ಧಾರ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರ್ಗರೇಟ್ ಅವರನ್ನು ರಾಜೀನಾಮೆ ನೀಡಿ ಎಂದು ಪಕ್ಷವೇನೂ ಕೇಳಿಕೊಂಡಿರಲಿಲ್ಲ. ಅವರಾಗಿಯೇ ರಾಜೀನಾಮೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.ವಿಧಾನಸಭೆ ಲೋಕಸಭೆ ಹಾಗೂ ಯಾವುದೇ ಪಕ್ಷಕ್ಕೆ ಅದರದೇ ಆದ ವೇದಿಕೆ ಇರುತ್ತದೆ. ಅದನ್ನು ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಅದೇ ರೀತಿ ಇಲ್ಲಿಯೂ ಆಗಿದೆ ಎಂದು ಅವರು ವಿವರಣೆ ನೀಡಿದ್ದಾರೆ.ಮಾರ್ಗರೇಟ್ ಆಳ್ವ ಅವರ ರಾಜೀನಾಮೆಯನ್ನು ಸ್ವೀಕರಿಸಿರುವುದು ಪಕ್ಷದ ಹೈಕಮಾಂಡ್ ನಿರ್ಧಾರವಾಗಿದ್ದು, ಈ ಬಗ್ಗೆ ರಕ್ಷಣಾ ಸಚಿವ ಎ.ಕೆ. ಆಂಟನಿ ನೇತೃತ್ವದಲ್ಲಿ ತನಿಖೆ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ. |