ಮಾರ್ಗರೇಟ್ ಆಳ್ವ ಹೇಳಿಕೆಗೆ ಬೆಂಬಲ ಸೂಚಿಸುವ ಮೂಲಕ ಕಾಂಗ್ರೆಸ್ ಕೆಂಗಣ್ಣಿಗೆ ಗುರಿಯಾಗಿದ್ದ ಕಾಂಗ್ರೆಸ್ ಹಿರಿಯ ಮುಖಂಡ ಜಾಫರ್ ಷರೀಫ್ ಇದೀಗ ತಮ್ಮ ಮಾತಿನ ಧಾಟಿ ಬದಲಾಯಿಸಿದ್ದಾರೆ.
ಟಿಕೆಟ್ ಮಾರಾಟದ ಆರೋಪ ಮಾಡಿದ ಮಾರ್ಗರೇಟ್ ಆಳ್ವ ಅವರ ಬಗ್ಗೆ ಕೆಪಿಸಿಸಿ ಸಭೆಯಲ್ಲಿ ಅವರು ತೀವ್ರಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವಿಧಾನಸಭಾ ಚುನಾವಣೆ ಬಳಿಕ ನಡೆದ ಎಐಸಿಸಿ ಅಧಿವೇಶನದಲ್ಲಿ ಆಳ್ವ ಈ ವಿಷಯ ಪ್ರಸ್ತಾಪಿಸಬಹುದಿತ್ತು. ಆದರೆ ಬಹಿರಂಗವಾಗಿ ಹೇಳಿಕೆ ನೀಡಬಾರದಿತ್ತು. ಅವರು ಇದ್ದಕ್ಕಿದ್ದಂತೆ ಆರೋಪ ಮಾಡಿದ್ದೇಕೆ ಎಂಬುದು ಗೊತ್ತಾಗಲಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
|