ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಶಾಸ್ತ್ರೀಯ ಸ್ಥಾನ: ನ.27ರಂದು ವಿಚಾರಣೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಶಾಸ್ತ್ರೀಯ ಸ್ಥಾನ: ನ.27ರಂದು ವಿಚಾರಣೆ
ಕನ್ನಡ ಮತ್ತು ತೆಲುಗಿಗೆ ಶಾಸ್ತ್ರೀಯ ಸ್ಥಾನಮಾನ ನೀಡಿದ ಕುರಿತು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಅಂತಿಮ ವಿಚಾರಣೆ ನ.27ರಂದು ನಡೆಯಲಿದೆ.

ಕನ್ನಡ ಮತ್ತು ತೆಲುಗಿಗೆ ಶಾಸ್ತ್ರೀಯ ಸ್ಥಾನಮಾನ ನೀಡಲು ಕೇಂದ್ರ ಸರ್ಕಾರ ರಚಿಸಿರುವ ಸಮಿತಿಯನ್ನು ಪ್ರಶ್ನಿಸಿ, ತಮಿಳುನಾಡಿನ ಆರ್.ಗಾಂಧಿ ಎನ್ನುವವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಇತ್ತೀಚೆಗೆ ಅರ್ಜಿಯ ವಿಚಾರಣೆ ನಡೆಸಿದ್ದ ಮದ್ರಾಸ್ ಹೈಕೋರ್ಟ್, ಕನ್ನಡ ಮತ್ತು ತೆಲುಗಿಗೆ ಶಾಸ್ತ್ರೀಯ ಗೌರವ ನೀಡಿದ ಪ್ರತಿಯನ್ನು ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿತ್ತು.

ಇದೀಗ ಅರ್ಜಿಯ ಅಂತಿಮ ವಿಚಾರಣೆಯನ್ನು ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿಗಳಾದ ಗಂಗೂಲಿ ಹಾಗೂ ಇಬ್ರಾಹಿಂ ಖಲೀಪುಲ್ಲಾ ಅವರನ್ನೊಳಗೊಂಡ ನ್ಯಾಯಪೀಠ ನ.27ರಂದು ವಿಚಾರಣೆ ನಡೆಸಲಿದೆ.

ಕರ್ನಾಟಕದ ದೀಪಕ್ ತಿಮ್ಮಯ್ಯ ಎಂಬುವರು ಆರ್.ಗಾಂಧಿ ಎಂಬವರು ಶಾಸ್ತ್ರೀಯ ಸ್ಥಾನಮಾನಕ್ಕೆ ಸಂಬಂಧಿಸಿದಂತೆ ದಾಖಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಬೇಕು ಎಂದು ಮದ್ರಾಸ್ ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿದ್ದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಆನೆ ಸಾವು: ವರದಿ ನೀಡಲು ಹೈಕೋರ್ಟ್ ಆದೇಶ
ವೈದ್ಯರ ವಿರುದ್ಧ ಕ್ರಮಕ್ಕೆ ಹೈಕೋರ್ಟ್ ಆದೇಶ
ಆಳ್ವ 'ಮಾರ್ಗ' ತಪ್ಪು: ಷರೀಫ್
ರೇವಣ್ಣ ವಿರುದ್ಧ ಸರ್ಕಾರದ ಮತ್ತೊಂದು ಅಸ್ತ್ರ
ನೇಪಾಳ ಮಾದರಿ ಹೋರಾಟಕ್ಕೆ ನಕ್ಸಲ್ ಯೋಜನೆ!
ವೈದ್ಯರ ಮುಷ್ಕರ ಅಂತ್ಯ