ಪಕ್ಷದಲ್ಲಿ ಟಿಕೆಟ್ ಮಾರಾಟವಾಗಿದೆ ಎಂಬ ಹೇಳಿಕೆ ನಿಜವೆಂದು ಹೇಳಿರುವ ಸಚಿವ ನರೇಂದ್ರ ಸ್ವಾಮಿ ಅವರು ಈ ಬಗ್ಗೆ ದಾಖಲೆಗಳಿದ್ದರೆ ಹಾಜರುಪಡಿಸಲಿ ಎಂದು ಕೆಪಿಸಿಸಿ ಅಧ್ಯಕ್ಷ ದೇಶಪಾಂಡೆ ಸವಾಲು ಹಾಕಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಣ್ಣ ವಿಷಯವನ್ನು ದೊಡ್ಡದು ಮಾಡುವುದು ಸರಿಯಲ್ಲ. ಹೇಳಿಕೆಗಳನ್ನು ನೀಡುವ ಮೊದಲು ಯೋಚಿಸಲಿ ಎಂದು ಹೇಳಿದರು.
ನರೇಂದ್ರ ಸ್ವಾಮಿಯವರು ಸಚಿವರಾಗಿ ಉನ್ನತ ಸ್ಥಾನದಲ್ಲಿದ್ದಾರೆ. ಇಂತಹ ಹೇಳಿಕೆಗಳು ಅವರ ವ್ಯಕ್ತಿತ್ವವನ್ನು ತೋರಿಸುತ್ತದೆ ಎಂದು ಅವರು ಕಿಡಿಕಾರಿದರು.
ರಾಜಸ್ಥಾನದಲ್ಲಿಯೂ ಟಿಕೆಟ್ ಮಾರಾಟ ಮಾಡಿರುವ ಬಗ್ಗೆ ಸ್ವತಃ ಬಿಜೆಪಿ ಮುಖಂಡರೇ ಹೇಳಿಕೆ ನೀಡುತ್ತಿದ್ದಾರೆ. ಈ ಬಗ್ಗೆ ಸಚಿವರು ಏನು ಹೇಳುತ್ತಾರೆ ಎಂದು ಅವರು ಮರುಪ್ರಶ್ನೆ ಹಾಕಿದರು. |