ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಬೌದ್ಧ ಧರ್ಮ-ಅನಾವಶ್ಯಕ ವಿವಾದ: ಪೇಜಾವರ ಶ್ರೀ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಬೌದ್ಧ ಧರ್ಮ-ಅನಾವಶ್ಯಕ ವಿವಾದ: ಪೇಜಾವರ ಶ್ರೀ
ದಲಿತರು ಹಿಂದೂ ಧರ್ಮದಿಂದ ಬೌದ್ಧ ಧರ್ಮಕ್ಕೆ ಧರ್ಮಾಂತರಗೊಳ್ಳುವ ಕುರಿತಾಗಿ ತಮ್ಮ ಅನಿಸಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡು ವಿವಾದ ಸೃಷ್ಟಿಸಲಾಗಿದೆ ಎಂದು ಪೇಜಾವರ ಮಠದ ವಿಶ್ವೇಶ್ವರತೀರ್ಥ ಸ್ವಾಮಿಜಿ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವ್ಯಕ್ತಿ ಸ್ವಯಂ ಇಚ್ಛೆಯಿಂದ ಯಾವುದೇ ಧರ್ಮ ಸ್ವೀಕಾರಕ್ಕೆ ಸಂವಿಧಾನ ಅವಕಾಶ ಕಲ್ಪಿಸಿರುವಾಗ ಒಂದು ಧರ್ಮದ ವಿರುದ್ಧ ತಾವು ಹೇಗೆ ಹೇಳಿಕೆ ನೀಡಲು ಸಾಧ್ಯ ಎಂದು ಸ್ಪಷ್ಟಪಡಿಸಿದ್ದಾರೆ.

ಹಿಂದೂ ಧರ್ಮ ತೊರೆದು ಬೌದ್ಧ ಧರ್ಮ ಸೇರಬೇಡಿ ಎಂಬುದು ತಮ್ಮ ಅಭಿಪ್ರಾಯವಾಗಿತ್ತೇ ವಿನಃ ಅದು ಆದೇಶವಾಗಿರಲಿಲ್ಲ ಎಂದು ಅವರು ವಿವರಿಸಿದರು.

ಭಯೋತ್ಪಾದನೆ ಕೃತ್ಯಗಳಲ್ಲಿ ಕೆಲ ಮಠಾಧೀಶರು ಭಾಗಿಯಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಈ ಪ್ರಕರಣ ವಿಚಾರಣೆಯಲ್ಲಿದೆ. ಅದರ ಕುರಿತು ಪ್ರತಿಕ್ರಿಯಿಸಲು ಇಷ್ಟಪಡುವುದಿಲ್ಲ ಎಂದು ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಆಸ್ನೋಟಿಕರ್ ವಿರುದ್ಧ ವಾರಂಟ್ ಜಾರಿ
ಶಿವಮೊಗ್ಗ: ನಕ್ಸಲ್‌ನಿಂದ ಅಪಾರ ಶಸ್ತ್ರಾಸ್ತ್ರ ವಶ
ಮಾನನಷ್ಟ ಮೊಕದ್ದಮೆ ಹೂಡುವೆ: ಸಚಿವ ಸ್ವಾಮಿ
ಟಿಕೆಟ್ ಮಾರಾಟ-ದಾಖಲೆ ಕೊಡಿ: ದೇಶಪಾಂಡೆ
ಸಿಲಿಂಡರ್ ಸ್ಫೋಟಕ್ಕೆ ಓರ್ವ ಬಲಿ
ಬೆಂಗಳೂರು ಪುಸ್ತಕೋತ್ಸವಕ್ಕೆ ಅದ್ದೂರಿ ಚಾಲನೆ