ವಿಧಾನಸಭೆ ಉಪಚುನಾವಣೆ ಮತ್ತು ಲೋಕಸಭೆ ಸೇರಿದಂತೆ ಮುಂಬರುವ ಯಾವುದೇ ಚುನಾವಣೆಯಲ್ಲೂ ಕಾಂಗ್ರೆಸ್ ಜತೆ ಜೆಡಿಎಸ್ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಮಾಜಿ ಸಚಿವ ಚಲುವರಾಯಸ್ವಾಮಿ ತಿಳಿಸಿದರು.
ಅವರು ಶನಿವಾರ ಸುದ್ದಿಗಾರರೊಂದಿಗೆ ಮಾತನಾಡುತ್ತ,ನಮ್ಮ ಪಕ್ಷ ಕಾಂಗ್ರೆಸ್ ನಾಯಕರ ಮುಂದೆ ಹೊಂದಾಣಿಕೆ ಮಾಡಿಕೊಳ್ಳಿ ಎಂದು ಅರ್ಜಿ ಹಿಡಿದುಕೊಂಡು ಹೋಗಿರಲಿಲ್ಲ. ಇನ್ನಾದರೂ ಕಾಂಗ್ರೆಸ್ ನಾಯಕರು ಸುಳ್ಳು ಹೇಳಿಕೆ ನೀಡುವುದನ್ನು ನಿಲ್ಲಿಸಲಿ ಎಂದು ಎಚ್ಚರಿಕೆ ನೀಡಿದರು.
ಜೆಡಿಎಸ್ಗೆ ತನ್ನದೇ ಆದ ಸ್ವಂತ ಬಲವಿದೆ, ನಾವು ಸ್ವತಂತ್ರ ಹೋರಾಟದಿಂದ ಮುಂಬರುವ ಚುನಾವಣೆಯನ್ನು ಎದುರಿಸುತ್ತೇವೆ ಎಂದು ಚಲುವರಾಯ ಸ್ವಾಮಿ ಹೇಳಿದರು. ಕಾಂಗ್ರೆಸ್ ನಾಯಕರು ಸಭೆ,ಸಮಾರಂಭಗಳಲ್ಲಿ ಹೊಂದಾಣಿಕೆ ಕುರಿತು ನೀಡುತ್ತಿರುವ ಸುಳ್ಳು ಹೇಳಿಕೆಗಳನ್ನು ಬಿಡಬೇಕು ಎಂದರು. |