ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಕಾಂಗ್ರೆಸ್ ಜತೆ ಮೈತ್ರಿ ಇಲ್ಲ: ಚಲುರಾಯಸ್ವಾಮಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಕಾಂಗ್ರೆಸ್ ಜತೆ ಮೈತ್ರಿ ಇಲ್ಲ: ಚಲುರಾಯಸ್ವಾಮಿ
ವಿಧಾನಸಭೆ ಉಪಚುನಾವಣೆ ಮತ್ತು ಲೋಕಸಭೆ ಸೇರಿದಂತೆ ಮುಂಬರುವ ಯಾವುದೇ ಚುನಾವಣೆಯಲ್ಲೂ ಕಾಂಗ್ರೆಸ್ ಜತೆ ಜೆಡಿಎಸ್ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಮಾಜಿ ಸಚಿವ ಚಲುವರಾಯಸ್ವಾಮಿ ತಿಳಿಸಿದರು.

ಅವರು ಶನಿವಾರ ಸುದ್ದಿಗಾರರೊಂದಿಗೆ ಮಾತನಾಡುತ್ತ,ನಮ್ಮ ಪಕ್ಷ ಕಾಂಗ್ರೆಸ್ ನಾಯಕರ ಮುಂದೆ ಹೊಂದಾಣಿಕೆ ಮಾಡಿಕೊಳ್ಳಿ ಎಂದು ಅರ್ಜಿ ಹಿಡಿದುಕೊಂಡು ಹೋಗಿರಲಿಲ್ಲ. ಇನ್ನಾದರೂ ಕಾಂಗ್ರೆಸ್ ನಾಯಕರು ಸುಳ್ಳು ಹೇಳಿಕೆ ನೀಡುವುದನ್ನು ನಿಲ್ಲಿಸಲಿ ಎಂದು ಎಚ್ಚರಿಕೆ ನೀಡಿದರು.

ಜೆಡಿಎಸ್‌ಗೆ ತನ್ನದೇ ಆದ ಸ್ವಂತ ಬಲವಿದೆ, ನಾವು ಸ್ವತಂತ್ರ ಹೋರಾಟದಿಂದ ಮುಂಬರುವ ಚುನಾವಣೆಯನ್ನು ಎದುರಿಸುತ್ತೇವೆ ಎಂದು ಚಲುವರಾಯ ಸ್ವಾಮಿ ಹೇಳಿದರು. ಕಾಂಗ್ರೆಸ್ ನಾಯಕರು ಸಭೆ,ಸಮಾರಂಭಗಳಲ್ಲಿ ಹೊಂದಾಣಿಕೆ ಕುರಿತು ನೀಡುತ್ತಿರುವ ಸುಳ್ಳು ಹೇಳಿಕೆಗಳನ್ನು ಬಿಡಬೇಕು ಎಂದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ವಿದ್ಯುತ್ ಕಡಿತ: ಪ್ರತಿಭಟನೆಗೆ ಕಾಂಗ್ರೆಸ್ ಸಜ್ಜು
ನ್ಯಾ.ವೆಂಕಟಾಚಲ ಬಿಜೆಪಿಗೆ ಸೇರ್ಪಡೆ ?
ಹಿಂದೂ ದೇವರ ಅವಹೇಳನ ಕರಪತ್ರ: ಸಾರ್ವಜನಿಕರಿಂದ ಥಳಿತ
ಬೌದ್ಧ ಧರ್ಮ-ಅನಾವಶ್ಯಕ ವಿವಾದ: ಪೇಜಾವರ ಶ್ರೀ
ಆಸ್ನೋಟಿಕರ್ ವಿರುದ್ಧ ವಾರಂಟ್ ಜಾರಿ
ಶಿವಮೊಗ್ಗ: ನಕ್ಸಲ್‌ನಿಂದ ಅಪಾರ ಶಸ್ತ್ರಾಸ್ತ್ರ ವಶ