ಪ್ರಜಾಪ್ರಭುತ್ವ ದಿನವಾದ ಜನವರಿ 26ರಂದು ಭಾರತ ರತ್ನ ಪ್ರಶಸ್ತಿ ಪ್ರದಾನ ಆದ ಬಳಿಕ ಪಂಡಿತ್ ಭೀಮಸೇನ ಜೋಶಿ ಅವರಿಗೆ ರಾಜ್ಯದ ವತಿಯಿಂದ ಸನ್ಮಾನ ಕಾರ್ಯಕ್ರಮ ನಡೆಸಲು ಸರ್ಕಾರ ನಿರ್ಧರಿಸಿದೆ.ಈ ಕುರಿತು ಮಾಹಿತಿ ನೀಡಿದ ವಿಧಾನಪರಿಷತ್ ಸಭಾಪತಿ ವೀರಣ್ಣ ಮತ್ತಿಕಟ್ಟಿ, ಭೀಮಸೇನ್ ಜೋಶಿ ಅವರಿಗೆ ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು.ಧಾರವಾಡದಲ್ಲಿ ನಡೆಯುತ್ತಿರುವ ಉತ್ಸವಕ್ಕೂ ಅವರನ್ನು ಕರೆಸಿಕೊಳ್ಳುವ ಆಲೋಚನೆ ಇತ್ತು. ಅವರ ದೇಹಾರೋಗ್ಯ ಸರಿಯಾಗಿಲ್ಲದ ಕಾರಣ ಆ ನಿರ್ಧಾರವನ್ನು ಕೈಬಿಡಲಾಗಿದೆ ಎಂದರು.ಈ ನಿಟ್ಟಿನಲ್ಲಿ ಮುಂದೆ ಬೆಂಗಳೂರಿನಲ್ಲಿ ನಡೆಸಲು ಉದ್ದೇಶಿಸಿರುವ ಸನ್ಮಾನ ಸಮಾರಂಭದಲ್ಲಿ ವಿಶೇಷ ವಿಮಾನದ ವ್ಯವಸ್ಥೆ ಮಾಡಲು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದರು. |