ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಸಚಿವರ ಕಾರ್ಯವೈಖರಿ ಪರಿಶೀಲನೆ: ಸದಾನಂದಗೌಡ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಸಚಿವರ ಕಾರ್ಯವೈಖರಿ ಪರಿಶೀಲನೆ: ಸದಾನಂದಗೌಡ
ರಾಜ್ಯ ಸಚಿವರ ಕಾರ್ಯ ವೈಖರಿಯನ್ನು ಡಿಸೆಂಬರ್ 2ನೇ ವಾರದೊಳಗೆ ಪರಿಶೀಲನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಡಿ.ವಿ. ಸದಾನಂದಗೌಡ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 5 ತಿಂಗಳುಗಳಿಂದ ಕಾರ್ಯನಿರ್ವಹಿಸುತ್ತಿರುವ ಪಕ್ಷದ ಸಚಿವರ ಕಾರ್ಯದಕ್ಷತೆ, ಕಾರ್ಯವೈಖರಿ ಪರಿಶೀಲನೆಯಿಂದ ತಿಳಿಯಲಿದೆ ಎಂದು ತಿಳಿಸಿದರು.

ಮುಂಬರುವ ವಿಧಾನಸಭಾ ಉಪಚುನಾವಣೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ನಿವೃತ್ತ ಲೋಕಾಯುಕ್ತ ವೆಂಕಟಾಚಲ ಅವರು ಶೀಘ್ರದಲ್ಲಿ ಬಿಜೆಪಿ ಸೇರಲಿದ್ದಾರೆ. ಅವರು ಇಚ್ಛಿಸಿದರೆ ಲೋಕಸಭಾ ಚುನಾವಣೆಗೆ ಟಿಕೆಟ್ ನೀಡಲಾಗುವುದು ಎಂದು ಹೇಳಿದರು.

ಇದೇ ವೇಳೆ ಜೆಡಿಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು, ರಾಜ್ಯದಲ್ಲಿ ಜೆಡಿಎಸ್ ಮುಳುಗುತ್ತಿರುವ ಹಡಗು. ಮುಳುಗುತ್ತಿರುವ ತಮ್ಮ ಪಕ್ಷದ ರಕ್ಷಣೆಗಾಗಿ ಬಿಜೆಪಿ ವಿರುದ್ಧ ವಿನಾ ಕಾರಣ ಆರೋಪ ಮಾಡುತ್ತಿದ್ದಾರೆ ಎಂದು ದೂರಿದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಸಚಿವ ಆಸ್ನೋಟಿಕರ್ ಕೋರ್ಟ್‌ಗೆ ಶರಣು
ಬುದ್ದಿಜೀವಿಗಳು ರಾಜಕೀಯಕ್ಕೆ ಬರಲಿ: ಸದಾನಂದ ಗೌಡ
ಕಳ್ಳಭಟ್ಟಿ ತಡೆಗೆ ಬಿಗು ಕ್ರಮ: ವಿ.ಎಸ್.ಆಚಾರ್ಯ
ಜೆಡಿಎಸ್ ಕಾರ್ಯಕರ್ತರಿಂದ ಚೆನ್ನಿಗಪ್ಪಗೆ ಥಳಿತ
ವಿನೋದ್ ಕೊಲೆ: ಆರೋಪಿತರಿಗೆ ಜಾಮೀನು ನಿರಾಕರಣೆ
ಜೆಡಿಎಸ್ ಕಾಯಕಲ್ಪ ಪ್ರತಿಜ್ಞಾ ಸಮಾವೇಶ