ಕಾಂಗ್ರೆಸ್ನ ಕೆಲವು ನಿರ್ಧಾರದಿಂದ ಬೇಸತ್ತು ಪಕ್ಷದ ಸಂಘಟನೆಗಳಿಂದ ದೂರವಿದ್ದ ಮಾಜಿ ಉಪಮುಖ್ಯಮಂತ್ರಿ, ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ನಿಂದ ಬುಲಾವ್ ಬಂದಿದೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಅವರ ರಾಜಕೀಯ ಕಾರ್ಯದರ್ಶಿ ಅಹ್ಮದ್ ಪಟೇಲ್ ದೂರವಾಣಿ ಮೂಲಕ ಸಿದ್ದರಾಮಯ್ಯ ಅವರನ್ನು ಸಂಪರ್ಕಿಸಿ ಮೇಡಂ ಜತೆಯಲ್ಲಿ ಚರ್ಚಿಸಲು ಬರುವಂತೆ ಸೂಚಿಸಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಕನಕ ಜಯಂತಿ ಉತ್ಸವದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಸಿದ್ದರಾಮಯ್ಯ ವೇದಿಕೆ ಹಂಚಿಕೊಂಡಿದ್ದನ್ನು ಕಂಡ ಕೂಡಲೇ ಈ ಕರೆ ಬಂದಿದೆ ಎನ್ನಲಾಗಿದೆ.
ಪಕ್ಷದ ಅಧ್ಯಕ್ಷ ಸ್ಥಾನ ಸಿಗದಿರುವ ಬಗ್ಗೆ ಯಾವುದೇ ಬೇಸರ ಮಾಡಬೇಡಿ. ರಾಷ್ಟ್ರೀಯ ಹಿಂದುಳಿದ ವರ್ಗಗಳ ಅಧ್ಯಕ್ಷ ಸ್ಥಾನ ಅಥವಾ ಕಾಂಗ್ರೆಸ್ ಕಾರ್ಯಕಾರಿಣಿಯ ಕಾಯಂ ಆಹ್ವಾನಿತರ ಹುದ್ದೆಯಲ್ಲಿ ಒಂದನ್ನು ಒಪ್ಪಿಕೊಳ್ಳುವಂತೆ ಮನವಿ ಮಾಡಿದ್ದಾರೆ. ಆದರೆ ಸಿದ್ದರಾಮಯ್ಯ ಮಾತ್ರ ಒಪ್ಪಲಿಲ್ಲ ಎಂದು ಅವರ ಆಪ್ತ ವಲಯದ ಮೂಲಗಳು ಹೇಳಿವೆ.ಆದರೆ ಸಿದ್ದರಾಮಯ್ಯ ಆರು ರಾಜ್ಯಗಳ ಚುನಾವಣೆ ಮುಗಿದ ನಂತರ ಬರುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ. |