ಮಾಜಿ ಸಚಿವ ಚೆನ್ನಿಗಪ್ಪ ಅವರ ಮೇಲೆ ಜೆಡಿಎಸ್ ಸಮಾವೇಶದಂದು ಹಲ್ಲೆ ನಡೆಸಿದ ಆರೋಪಿಗಳ ಪತ್ತೆಗಾಗಿ ಎರಡು ಪೊಲೀಸ್ ತಂಡ ರಚಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಕೇಂದ್ರ ವಿಭಾಗದ ಡಿಸಿಪಿ ರಮೇಶ್ ನೇತೃತ್ವದಲ್ಲಿ ಎರಡು ವಿಶೇಷ ತಂಡವನ್ನು ರಚಿಸಲಾಗಿದ್ದು, ತಂಡಗಳು ಚೆನ್ನಿಗಪ್ಪ ಅವರ ಮೇಲೆ ಹಲ್ಲೆ ನಡೆಸಿದ ಆರೋಪಿಗಳಿಗಾಗಿ ಶೋಧ ಆರಂಭಿಸಿದೆ.
ಚೆನ್ನಿಗಪ್ಪ ಅವರ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಗಳು ಹಾಸನ ಜಿಲ್ಲೆಯ ಹೊಳೆನರಸೀಪುರ ಹಾಗೂ ಮಂಡ್ಯ ಜಿಲ್ಲೆಗೆ ಸೇರಿದವರು ಎನ್ನಲಾಗಿದ್ದು, ಆರೋಪಿಗಳ ಪತ್ತೆಗಾಗಿ ಈ ವಿಶೇಷ ತಂಡ ಜಿಲ್ಲೆಗೆ ತೆರಳಲಿದೆ.
ಚೆನ್ನಿಗಪ್ಪ ಹಾಗೂ ಅವರ ಕಾರಿನ ಚಾಲಕ, ಸ್ನೇಹಿತರ ಮೇಲೆ ಹಲ್ಲೆ ನಡೆಸಿ, ಚೆನ್ನಿಗಪ್ಪ ಅವರ ಬೆಲೆಬಾಳುವ ವಾಚ್ ಹಾಗೂ ಚಿನ್ನದ ಸರ ಅಪಹರಿಸಲಾಗಿತ್ತು. ಈ ಬಗ್ಗೆ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ. |