ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಚಲ್ಲಾ ಕೊಲೆ ಪ್ರಕರಣ: ಆರೋಪಿಗಳ ಬಂಧನ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಚಲ್ಲಾ ಕೊಲೆ ಪ್ರಕರಣ: ಆರೋಪಿಗಳ ಬಂಧನ
ನವೆಂಬರ್ 10 ರಂದು ಕೊಲೆಯಾದ ಖ್ಯಾತ ಪರಿಸರವಾದಿ ಚಲ್ಲಾ ಕೃಷ್ಣಮೂರ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆ ನಡೆದು ಎರಡು ದಿನಗಳ ನಂತರ ಪೊಲೀಸರು ಶಂಕಿತ ಆರೋಪಿ ಭೀಮಪ್ಪನನ್ನು ಬಂಧಿಸಿದ್ದು, ಉಳಿದ ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದರು. ಉಳಿದವರ ಮಾಹಿತಿ ತಿಳಿದ ತಕ್ಷಣ ಗೌರಿಬಿದನೂರು ಸರ್ಕಲ್ ಇನ್ಸ್‌ಪೆಕ್ಟರ್ ಶ್ರೀನಿವಾಸಮೂರ್ತಿ ಬೆಂಗಳೂರು ಗ್ರಾಮೀಣ ಪ್ರದೇಶದ ದೇವನಹಳ್ಳಿ-ಬೂದಿಗೆರೆ ಕ್ರಾಸ್ ಬಳಿ ನಾಲ್ವರನ್ನು ಬಂಧಿಸಿರುವುದಾಗಿ ಹೇಳಿದ್ದಾರೆ.

ಕೃಷ್ಣಮೂರ್ತಿಯವರ ಮೊಬೈಲ್ ಮತ್ತು ವೀಡಿಯೋ ಕ್ಯಾಮರಾವನ್ನೂ ಬಂಧಿತರಿಂದ ವಶಪಡಿಸಿಕೊಳ್ಳಲಾಗಿದೆ. ಈ ಕೃತ್ಯಕ್ಕೆ ಬಳಸಿದ್ದಾರೆ ಎನ್ನಲಾದ ವಾಹನವನ್ನು ಮುಟ್ಟುಗೋಲು ಹಾಕಿಕೊಂಡು ಉಳಿದ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಮರೆತುಹೋದ ಸ್ಫೋಟ: ವಿಚಾರಣೆಗೆ ಬಿದರಿ ಸಾರಥ್ಯ!
ಸರಕಾರಿ ಶಾಲೆಗಳ ಅಧ್ಯಯನ: ಕಾಗೇರಿ
ಸರಕಾರಿ ಗೌರವದೊಂದಿಗೆ ಗುರುಪ್ರಸಾದ್ ಅಂತ್ಯಕ್ರಿಯೆ
ಕಾನೂನುಬಾಹಿರ ಬಂಧನ-ಠಾಣೆಗೆ ಐಜಿಪಿ ದಾಳಿ
ನ. 28: ಸರಕಾರದ ವಿರುದ್ಧ ಜೆಡಿಎಸ್ ಪ್ರತಿಭಟನೆ
ಬಂಗ್ಲೆ ನಿರ್ಮಾಣ: ಪ್ರತಿಪಕ್ಷಗಳಿಂದ ಅಪಸ್ವರ