ಯಾವುದೇ ಅಭಿವೃದ್ದಿ ಕಾರ್ಯ ಮಾಡದೇ ಕಾಲಹರಣ ಮಾಡುತ್ತಿರುವ ಆಡಳಿತರೂಢ ಬಿಜೆಪಿ ಸರಕಾರದ ವಿರುದ್ಧ ಹರಿಹಾಯ್ದಿರುವ ಕಾಂಗ್ರೆಸ್,ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಬ್ಬ ಸುಳ್ಳಿನ ಸರದಾರ ಎಂದು ಕಟುವಾಗಿ ಟೀಕಿಸಿದೆ.
ಚುನಾವಣೆಯ ಮೊದಲು ಉಚಿತ ವಿದ್ಯುತ್ ನೀಡುವುದಾಗಿ ಆಶ್ವಾನೆ ನೀಡಿ ಅಧಿಕಾರದ ಗದ್ದುಗೆ ಏರಿದ ಬಿಜೆಪಿ, ಇದೀಗ ಯಾವುದೇ ಅಭಿವೃದ್ದಿ ಕಾರ್ಯಗಳತ್ತ ಗಮನ ಹರಿಸದೇ ಜನರ ದಿಕ್ಕು ತಪ್ಪಿಸುತ್ತಿರುವುದಾಗಿ ಕಾಂಗ್ರೆಸ್ನ ವಿ.ಎಸ್.ಉಗ್ರಪ್ಪ ಬಿಜೆಪಿ ವಿರುದ್ಧ ಉಗ್ರಾವತಾರ ತಾಳಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸಚಿವ ಕೆ.ಎಸ್.ಈಶ್ವರಪ್ಪ ಸುಳ್ಳು ಹೇಳುವುದರಲ್ಲಿ ಮೊದಲಿಗರು,ಸುಳ್ಳು ಹೇಳುವುದರಲ್ಲಿ ಯಾವುದಾದರು ಬಹುಮಾನ ನೀಡುವುದಿದ್ದರೆ ಅದನ್ನು ಇವರಿಗೆ ನೀಡಬೇಕು ಎಂದು ಲೇವಡಿ ಮಾಡಿದರು.
ಅಲ್ಲದೇ ರಾಜ್ಯ ಸರಕಾರ ಚಳಿಗಾಲದ ಅಧಿವೇಶನವನ್ನೂ ಇನ್ನೂ ಕರೆದಿಲ್ಲ, ರಾಜ್ಯದಲ್ಲಿ ವಿದ್ಯುತ್ ಅಭಾವದಿಂದಾಗಿ ರೈತರು ಸಾವಿಗೆ ಶರಣಾಗುತ್ತಿದ್ದಾರೆ. ಆ ನಿಟ್ಟಿನಲ್ಲಿ ರಾಜ್ಯದಲ್ಲಿ ವಿದ್ಯುತ್ ಸಮಸ್ಯೆಯನ್ನು ಖಂಡಿಸಿ ಪಕ್ಷದ ವತಿಯಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿಯೂ ಅವರು ಈ ಸಂದರ್ಭದಲ್ಲಿ ತಿಳಿಸಿದರು. |