ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಡಿ. 27ರಂದು ವಿಧಾನಸಭಾ ಉಪಚುನಾವಣೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಡಿ. 27ರಂದು ವಿಧಾನಸಭಾ ಉಪಚುನಾವಣೆ
ರಾಜ್ಯ ವಿಧಾನಸಭೆಯ ಏಳು ಕ್ಷೇತ್ರಗಳಿಗೆ ಚುನಾವಣಾ ದಿನಾಂಕ ಪ್ರಕಟಗೊಳಿಸಿದ್ದು, ರಾಜ್ಯ ರಾಜಕೀಯದಲ್ಲಿ ಬಿರುಸಿನ ಚಟುವಟಿಕೆಗಳು ಆರಂಭವಾಗಿದೆ.

ಮಧುಗಿರಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ಚುನಾವಣಾ ತಕರಾರು ಅರ್ಜಿಯ ವಿಚಾರಣೆ ಬಾಕಿ ಇರುವುದರಿಂದ ಆ ಕ್ಷೇತ್ರದ ಚುನಾವಣೆ ಪ್ರಕಟಿಸಿಲ್ಲ. ಉಳಿದಂತೆ ಬೆಳಗಾವಿ ಜಿಲ್ಲೆಯ ಅರಭಾವಿ, ಹುಕ್ಕೇರಿ, ತುಮಕೂರು ಜಿಲ್ಲೆಯ ತುರುವೇಕೆರೆ, ಮಂಡ್ಯ ಜಿಲ್ಲೆಯ ಮದ್ದೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡ ಬಳ್ಳಾಪುರ, ರಾಯಚೂರು ಜಿಲ್ಲೆಯ ದೇವದುರ್ಗ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕಾರವಾರ ವಿಧಾನಸಭಾ ಕ್ಷೇತ್ರಗಳಿಗೆ ಡಿಸೆಂಬರ್ 27ರಂದು ಚುನಾವಣೆ ನಡೆಯಲಿದೆ.

ಚುನಾವಣೆ ಕುರಿತು ಡಿಸೆಂಬರ್ 3ರಂದು ಅಧಿಸೂಚನೆ ಪ್ರಕಟಗೊಳ್ಳಲಿದ್ದು, ಡಿಸೆಂಬರ್ 10ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿರುತ್ತದೆ. ಅಂತೆಯೇ ಡಿ.11ರಂದು ನಾಮಪತ್ರ ಪರಿಶೀಲನೆ ನಡೆಸಲಿದ್ದು, ಡಿ. 13ರಂದು ನಾಮಪತ್ರ ವಾಪಾಸ್ ಪಡೆಯಲು ಕೊನೆಯ ದಿನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಕಳೆದ ಚುನಾವಣೆಯಲ್ಲಿ 110 ಸ್ಥಾನ ಪಡೆದು ಆರು ಜನ ಪಕ್ಷೇತರರ ಬೆಂಬಲದೊಂದಿಗೆ ಸರ್ಕಾರ ರಚನೆ ಮಾಡಿದ್ದ ಬಿಜೆಪಿ ತನ್ನ ಸ್ಥಾನ ಭದ್ರ ಮಾಡಿಕೊಳ್ಳಲು ಕಾಂಗ್ರೆಸ್ ಮೂವರು ಮತ್ತು ಜೆಡಿಎಸ್ ನ ನಾಲ್ವರು ಸೇರಿ ಏಳು ಜನರನ್ನು ಆಪರೇಷನ್ ಕಮಲದ ಮೂಲಕ ತನ್ನತ್ತ ಸೆಳೆಯಿತು.

ಅದರಲ್ಲಿ ಬಾಲಚಂದ್ರ ಜಾರಕಿಹೊಳಿ, ಉಮೇಶ್ ಕತ್ತಿ, ಆನಂದ ಅಸ್ನೋಟಿಕರ್, ಹಾಗೂ ಶಿವನಗೌಡ ನಾಯಕ್ ಇದೀಗ ಸಚಿವ ಸಂಪುಟದಲ್ಲಿ ಸಚಿವರನ್ನಾಗಿ ಮಾಡಲಾಗಿತ್ತು. ಇನ್ನುಳಿದ ಮೂವರಾದ ಜಗ್ಗೇಶ್, ಬಿ.ಸಿ.ಗೌರಿಶಂಕರ್ ಮತ್ತು ಜೆ. ನರಸಿಂಹಸ್ವಾಮಿ ಅವರನ್ನು ವಿವಿಧ ನಿಗಮ ಮಂಡಳಿಗೆ ನೇಮಕ ಮಾಡಲಾಗಿತ್ತು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ನಕ್ಸಲರಿಂದ ಪೊಲೀಸರಿಗೆ ಬಹಿರಂಗ ಪತ್ರ
ಕ್ಯಾಟ್‌ವಾಕ್ ಮಾಡಿದ ಇನ್ಸ್‌ಪೆಕ್ಟರ್ ಅಮಾನತು
ಚುನಾವಣೆ: ಶೀಘ್ರವೇ ಅಭ್ಯರ್ಥಿಗಳ ಪಟ್ಟಿ - ಡಿ.ವಿ.
ಉಪಚುನಾವಣೆ ಮುಂದೂಡಿಕೆಗೆ ಕೇಂದ್ರದ ಹುನ್ನಾರ: ನಾಯಕ್
ಚರ್ಚ್ ಸ್ಫೋಟ: ನ.28ಕ್ಕೆ ಶಿಕ್ಷೆ ಪ್ರಮಾಣ ಪ್ರಕಟ
ತೊಂಬಟ್ಟು: ಮೃತ ನಕ್ಸಲರಿಗೆ ಶ್ರದ್ಧಾಂಜಲಿ