ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಯಡಿಯೂರಪ್ಪ ಪುತ್ರಗೆ ಟಿಕೆಟ್‌‌ಗೆ ಒತ್ತಾಯ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಯಡಿಯೂರಪ್ಪ ಪುತ್ರಗೆ ಟಿಕೆಟ್‌‌ಗೆ ಒತ್ತಾಯ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ರಾಘವೇಂದ್ರ ಅವರಿಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ನೀಡಬೇಕೆನ್ನುವ ಒತ್ತಡ ಪಕ್ಷದಲ್ಲಿ ಹೆಚ್ಚುತ್ತಿದೆ.

ಶಿವಮೊಗ್ಗ ಜಿಲ್ಲೆಯ ಕೆಲವು ಮುಖಂಡರ ನಿಯೋಗವು, ಚುನಾವಣಾ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತ್‌ ಕುಮಾರ್ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಡಿ.ವಿ.ಸದಾನಂದ ಗೌಡ ಅವರನ್ನು ಭೇಟಿಯಾಗಿ ಈ ಕುರಿತು ಒತ್ತಾಯಿಸಿದ್ದಾರೆ.

ಆಹಾರ ಸಚಿವ ಹಾಲಪ್ಪ, ಸಾಗರ ಕ್ಷೇತ್ರದ ಶಾಸಕ ಬೇಲೂರು ಗೋಪಾಲಕೃಷ್ಣ ಮುಂತಾದವರು ನಿಯೋಗದಲ್ಲಿದ್ದರು. ಆಯನೂರು ನಂಜುನಾಥ್ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿರುವುದರಿಂದ ಅವರಿಗೆ ಟಿಕೆಟ್ ನೀಡಬಾರದು ಎಂದು ಒತ್ತಾಯಿಸಿದ್ದಾರೆ. ರಾಘವೇಂದ್ರ ಅವರಿಗೆ ಟಿಕೆಟ್ ನೀಡುವುದರಿಂದ ಅವರ ಗೆಲುವಿನಲ್ಲಿ ಯಡಿಯೂರಪ್ಪ ಅವರ ವರ್ಚಸ್ಸು ಪರಿಣಾಮ ಬೀರುತ್ತದೆ ಎನ್ನುವ ವಾದವನ್ನು ನಿಯೋಗ ಮುಖಂಡರ ಮುಂದಿಟ್ಟಿತು.

ಈ ನಡುವೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಸಾಧ್ಯತೆಯನ್ನು ಬಿಜೆಪಿ ಮುಕ್ತವಾಗಿರಿಸಿಕೊಂಡಿದೆ. ಕಾಂಗ್ರೆಸ್‌ನಿಂದ ಹೊರಬಂದು ಸಿದ್ದರಾಮಯ್ಯ ಪಕ್ಷ ಕಟ್ಟುತ್ತಾರೆ ಎಂಬ ಹಿನ್ನೆಲೆಯಲ್ಲಿ ಇದಕ್ಕೆ ಮಹತ್ವ ಬಂದಿದೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple, Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ರಾಷ್ಟ್ರಪತಿ ಸೇವಾಪದಕ
ಮಹಾಜನ ವರದಿ ಜಾರಿ ಒತ್ತಾಯ
ಸೇತುವೆ ಕುಸಿತ: ಎರಡು ಮೃತದೇಹ ಪತ್ತೆ
ಗುಲ್ಬರ್ಗಾದಲ್ಲಿ ಭಾರೀ ಪ್ರಮಾಣದ ಸ್ಫೋಟಕ ವಶ
ಕೋಲಾರ: ತಿಪ್ಪೆಯಲ್ಲಿ ನಿಗೂಢ ಸ್ಫೋಟ
ಸದನ ಖಾಲಿ...ಖಾಲಿ...ಶಾಸಕರು ಸ್ವಕ್ಷೇತ್ರದತ್ತ ಪ್ರಯಾಣ