ಒಂದೆಡೆ ನೂತನ ಪಕ್ಷ ರಚನೆ ಊಹಾಪೋಹ ಹರಿದಾಡುತ್ತಿದ್ದರೆ, ಮತ್ತೊಂದೆಡೆ ಸಿದ್ದರಾಮಯ್ಯನವರು, ಕಾಂಗ್ರೆಸ್ ಬಿಡುವ ಪ್ರಶ್ನೆಯೇ ಇಲ್ಲ ಎಂದು ಮಂಗಳವಾರ ಸ್ಪಷ್ಟಪಡಿಸಿದ ಅವರು ತಾನು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಎಂದಿದ್ದಾರೆ.
ಸಿದ್ದರಾಮಯ್ಯ ಅವರು ಜ.31ರಂದು ಹೊಸ ಪಕ್ಷಕ್ಕೆ ಚಾಲನೆ ಸಿಗಲಿದೆ ಎಂದು ವರ್ತೂರು ಪ್ರಕಾಶ್ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದ್ದರು. ಆದರೆ ಬಳಿಕ ಅದಕ್ಕೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ತನ್ನ ಬೆಂಬಲಿಗರು ನೀಡಿದ್ದು ಅವರ ಹೇಳಿಕೆ ಅಷ್ಟೇ. ಆದರೆ ನಾನಿನ್ನೂ ಕಾಂಗ್ರೆಸ್ನಲ್ಲಿಯೇ ಇದ್ದೇನೆ ಎಂದು ಹೇಳಿದ್ದಾರೆ.
ಹೊಸ ಪಕ್ಷ ರಚನೆ ಕುರಿತಂತೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ರಾಜಕೀಯ ನಿಂತ ನೀರಲ್ಲ, ದ್ರುವೀಕರಣ ಆಗುತ್ತಲೇ ಇರುತ್ತದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಆಕಾಂಕ್ಷಿ ತಾನು ಎಂದು ಘೋಷಿಸುವ ಮೂಲಕ ಕಾಂಗ್ರೆಸ್ಗೆ ಸ್ಪಷ್ಟ ಸಂದೇಶವೊಂದನ್ನು ರವಾನಿಸಿದ್ದಾರೆ. |