ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಪಕ್ಷದಿಂದ ತೊಲಗುವವರು ತೊಲಗಲಿ: ಡಿಕೆಶಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಪಕ್ಷದಿಂದ ತೊಲಗುವವರು ತೊಲಗಲಿ: ಡಿಕೆಶಿ
ಕಾಂಗ್ರೆಸ್‌‌ನಿಂದ ಮತ್ತಷ್ಟು ಮುಖಂಡರು ಹೋದರೂ ಚಿಂತೆ ಇಲ್ಲ. ಕಾರ್ಯಕರ್ತರ ಬಲದೊಂದಿಗೆ ಪಕ್ಷ ಬಲಿಷ್ಠವಾಗಲಿದೆಯೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಆಪರೇಷನ್ ಕಮಲ, ಶಿಕ್ಷಣದಲ್ಲಿ ಕೇಸರೀಕರಣ, ರೈತರ ಮೇಲೆ ಹಲ್ಲೆ, ಚರ್ಚ್‌ಗಳ ಮೇಲೆ ದಾಳಿ ನಡೆಸಿದ ಆಡಳಿತಾರೂಢ ಬಿಜೆಪಿಯ ಕಾರ್ಯವೈಖರಿ ಬಗ್ಗೆ ವಾಗ್ದಾಳಿ ನಡೆಸಿದರು.

ಸಾಮಾಜಿಕ ಚಿಂತನೆ ಇಲ್ಲದ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಬೇಕೆಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದ ಅವರು, ಬಿಜೆಪಿ ಸರ್ಕಾರದಲ್ಲಿ ಅಲ್ಪಸಂಖ್ಯಾತರಿಗೆ ರಕ್ಷಣೆ ಇಲ್ಲವಾಗಿದೆ. ಭಯೋತ್ಪಾದನೆ ನಿಗ್ರಹ ನೆಪದಲ್ಲಿ ಶಿಕ್ಷಣ ರಂಗವನ್ನು ಕೇಸರೀಕರಣ ಮಾಡಲು ಹೊರಟಿದೆ. ಗೊಬ್ಬರ ಕೇಳಿದ ರೈತರ ಮೇಲೆ ಗೋಲಿಬಾರ್ ನಡೆಸಿರುವುದು ಸರ್ಕಾರದ ಸಾಧನೆಯಾಗಿದೆ ಎಂದರು.

ಜೆಡಿಎಸ್ ಬಿಜೆಪಿ ಮತ್ತು ಬಿಜೆಪಿ ಅಧಿಕಾರವಧಿಯಲ್ಲಿ ರಾಜ್ಯ 25 ವರ್ಷಗಳಷ್ಟು ಹಿಂದಕ್ಕೆ ಹೋಗಿದೆಯೆಂದು ದೂರಿದ ಅವರು, ರಾಜ್ಯದ ಜನತೆಗೆ ಹಲವಾರು ಆಶ್ವಾಸನೆಗಳನ್ನು ಕೊಟ್ಟು ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಯಾವುದೇ ಜನಪರ ಕಾರ್ಯಕ್ರಮವನ್ನು ಹಮ್ಮಿಕೊಂಡಿಲ್ಲವೆಂದು ದೂರಿದರು.

ಯುಪಿಎ ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಜನತೆಗೆ ತಲುಪಿಸುವ ಮೂಲಕ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಿಸಲು ಕಾರ್ಯಕರ್ತರು ಶ್ರಮಿಸಬೇಕೆಂದು ಕರೆ ನೀಡಿದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple, Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಬಿಜೆಪಿ ನಿಲುವು ಮೆಚ್ಚಿ ಸೇರ್ಪಡೆ: ನಾಗಮಾರಪಲ್ಲಿ
ವ್ಯಾಲೆಂಟೈನ್ಸ್: ಡೇಟಿಂಗ್ ಮಾಡಿದ್ರೆ ಮದ್ವೆ ಮಾಡಿಸ್ತಾರೆ ಜೋಕೆ!
ಅಕ್ಷರ ಜಾತ್ರೆ: ಅವ್ಯವಸ್ಥೆ ವಿರುದ್ಧ ಆಕ್ರೋಶ
ಕನ್ನಡಿಗರನ್ನು ಕೆಣಕಿದರೆ ತಕ್ಕ ಪಾಠ: ಯಡಿಯೂರಪ್ಪ
ಸಂಪಂಗಿ ಲಂಚ ಪ್ರಕರಣ ನಾಚಿಕೆಗೇಡು: ಕೃಷ್ಣ
ರಾಜ್ಯ ಚಿತ್ರಕಲಾ ಶಿಕ್ಷಕರ ಸಮ್ಮೇಳನ