ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಪ್ರತಿಭಟನೆ: ಡಿಕೆಶಿ - ಕೃಷ್ಣಭೈರೇಗೌಡ ಬಂಧನ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಪ್ರತಿಭಟನೆ: ಡಿಕೆಶಿ - ಕೃಷ್ಣಭೈರೇಗೌಡ ಬಂಧನ
NRB
ಭಯೋತ್ಪಾದನಾ ಜಾಗೃತಿ ಅಭಿಯಾನದ ವಿರುದ್ಧದ ಕಾಂಗ್ರೆಸ್ ಹೋರಾಟ ತೀವ್ರ ಸ್ವರೂಪ ತಾಳಿದ್ದು, ಗುರುವಾರ ಮತ್ತೆ ಪ್ರತಿಭಟನೆಗೆ ಮುಂದಾದ ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಭೈರೇಗೌಡರನ್ನು ಪೊಲೀಸರು ಬಂಧಿಸಿದ್ದಾರೆ.

ಬುಧವಾರ ಸೆಂಟ್ರಲ್ ಕಾಲೇಜಿನ ಆವರಣದಲ್ಲಿ ಭಯೋತ್ಪಾದನಾ ಜಾಗೃತಿ ಅಭಿಯಾನ ಕುರಿತು ನಡೆಯುತ್ತಿದ್ದ ಸಭೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರು ಅಡ್ಡಿಪಡಿಸಿದ ಸಂದರ್ಭದಲ್ಲಿ ಪೊಲೀಸರು ಲಾಠಿ ಪ್ರಹಾರ ನಡೆಸಿ, ಸುಮಾರು 20 ಮಂದಿಯನ್ನು ಬಂಧಿಸಿದ್ದರು.

ಆಡಳಿತಾರೂಢ ಬಿಜೆಪಿ ಸರ್ಕಾರ ಭಯೋತ್ಪಾದನಾ ಜಾಗೃತಿ ಅಭಿಯಾನದ ಹೆಸರಲ್ಲಿ ಶಿಕ್ಷಣದ ಕೇಸರೀಕರಣಕ್ಕೆ ಹೊರಟಿದೆ ಎಂದು ಡಿ.ಕೆ.ಶಿವಕುಮಾರ್ ಗಂಭೀರವಾಗಿ ಆರೋಪಿಸಿದ್ದು,ಯಾವುದೇ ಕಾರಣಕ್ಕೂ ಅದಕ್ಕೆ ಅವಕಾಶ ನೀಡುವುದಿಲ್ಲ ಎಂದು ನಿನ್ನೆ ಗುಡುಗಿದ್ದರು.
NRB
ಇಂದು ಬೆಳಿಗ್ಗೆ ಸರ್ಕಾರದ ಧೋರಣೆ ಹಾಗೂ ಅಭಿಯಾನ ಕಾರ್ಯಕ್ರಮದ ವಿರುದ್ಧ ಪ್ರತಿಭಟನೆಗೆ ಇಳಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಡಿಕೆಶಿ ಹಾಗೂ ಯುವ ಕಾಂಗ್ರೆಸ್ ಮುಖಂಡ ಕೃಷ್ಣಭೈರೇಗೌಡ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸುವ ಮೂಲಕ ಪ್ರಕರಣ ಮತ್ತಷ್ಟು ಗಂಭೀರವಾಗಿ ಲಕ್ಷಣ ಗೋಚರಿಸತೊಡಗಿದೆ.

ಅಡ್ಡಿ ಪಡಿಸಿದರೆ ಕಠಿಣ ಕ್ರಮ: ಭಯೋತ್ಪಾದನಾ ಜಾಗೃತಿ ಅಭಿಯಾನ ಮಾಡುವುದು ನಮ್ಮ ಕರ್ತವ್ಯವಾಗಿದೆ, ಅದಕ್ಕೆ ಎಲ್ಲ ರಾಜಕಾರಣಿಗಳು ಬೆಂಬಲ ನೀಡಬೇಕು. ಅದನ್ನು ಬಿಟ್ಟು ಅಡ್ಡಿ ಪಡಿಸುವಂತ ಕಾರ್ಯಕ್ಕೆ ಮುಂದಾದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆಯನ್ನೂ ನೀಡಿದ್ದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple, Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಪಕ್ಷದಿಂದ ತೊಲಗುವವರು ತೊಲಗಲಿ: ಡಿಕೆಶಿ
ಬಿಜೆಪಿ ನಿಲುವು ಮೆಚ್ಚಿ ಸೇರ್ಪಡೆ: ನಾಗಮಾರಪಲ್ಲಿ
ವ್ಯಾಲೆಂಟೈನ್ಸ್: ಡೇಟಿಂಗ್ ಮಾಡಿದ್ರೆ ಮದ್ವೆ ಮಾಡಿಸ್ತಾರೆ ಜೋಕೆ!
ಅಕ್ಷರ ಜಾತ್ರೆ: ಅವ್ಯವಸ್ಥೆ ವಿರುದ್ಧ ಆಕ್ರೋಶ
ಕನ್ನಡಿಗರನ್ನು ಕೆಣಕಿದರೆ ತಕ್ಕ ಪಾಠ: ಯಡಿಯೂರಪ್ಪ
ಸಂಪಂಗಿ ಲಂಚ ಪ್ರಕರಣ ನಾಚಿಕೆಗೇಡು: ಕೃಷ್ಣ