ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಆರ್ಥಿಕ ಹಿಂಜರಿತ ರಕ್ಷಣಾ ವಲಯಕ್ಕೆ ಧಕ್ಕೆಯಿಲ್ಲ: ಆಂಟನಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಆರ್ಥಿಕ ಹಿಂಜರಿತ ರಕ್ಷಣಾ ವಲಯಕ್ಕೆ ಧಕ್ಕೆಯಿಲ್ಲ: ಆಂಟನಿ
ಜಾಗತಿಕ ಆರ್ಥಿಕ ಹಿಂಜರಿತದಿಂದ ದೇಶದ ರಕ್ಷಣಾ ವ್ಯವಸ್ಥೆ ಬಲಪಡಿಸುವ ಯೋಜನೆಗಳ ಮೇಲೆ ಯಾವುದೇ ಪರಿಣಾಮ ಉಂಟಾಗುವುದಿಲ್ಲ ಎಂದು ರಕ್ಷಣಾ ಸಚಿವ ಎ.ಕೆ. ಆಂಟನಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಏರ್ ಇಂಡಿಯಾ -2009ರ ಪ್ರದರ್ಶನ ಹಿನ್ನೆಲೆಯಲ್ಲಿ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಿರುವ ಅಂತಾರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ದೇಶದ ಹಿತದೃಷ್ಟಿಯಿಂದ ಸೇನೆಯ ಎಲ್ಲ ವಿಭಾಗಗಳಿಗೆ ಅಗತ್ಯ ಸೌಕರ್ಯ ಒದಗಿಸಲು ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ರಕ್ಷಣಾ ವಲಯಕ್ಕೆ ಸಂಬಂಧಿಸಿದಂತೆ ಅಭಿವೃದ್ದಿ ಹಾಗೂ ಸಂಶೋಧನೆಗೆ ಹೆಚ್ಚಿನ ಒತ್ತು ನೀಡಲಾಗುವುದು. ಈ ಕುರಿತು ಆಯಾ ಸೇನಾ ಮುಖ್ಯಸ್ಥರೊಂದಿಗೆ ಚರ್ಚಿಸಲಾಗುವುದು ಎಂದು ಅವರು ತಿಳಿಸಿದರು.

ಮುಂಬಯಿ ದಾಳಿ ಪ್ರಕರಣದ ಬಳಿಕ ಸೇನೆಗೆ ಹೆಚ್ಚು ಒತ್ತು ನೀಡುವ ಬಗ್ಗೆ ಗಂಭೀರ ಚಿಂತನೆ ನಡೆಸಲಾಗಿದೆ. ರಕ್ಷಣಾ ಸಂಬಂಧಿತ ಸಂಶೋಧನೆಗಳಿಗೆ ಇಲಾಖೆ ಬಜೆಟ್‌ನಲ್ಲಿ ಕೇವಲ ಶೇ.6ರಷ್ಟು ಹಣ ಬಳಸಲಾಗುತ್ತಿದೆ. ಇನ್ನು ಮುಂದೆ ಇದಕ್ಕೆ ಅಧಿಕ ಪ್ರೋತ್ಸಾಹ ಕೊಡಲಾಗುವುದು ಎಂದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple, Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಪ್ರೇಮಿಗಳಿಗೆ ರಕ್ಷಣೆ ನೀಡಿ-ಹೈಕೋರ್ಟ್‌ಗೆ ಮೊರೆ
ಗಣಿಗಾರಿಕೆ ಆದೇಶ ಹೈಕೋರ್ಟ್‌ನಿಂದ ವಜಾ
ಅಭಿವೃದ್ದಿ ಹಣ ವಿನಿಯೋಗಕ್ಕೆ ಪ್ರತ್ಯೇಕ ಲೆಕ್ಕ ಖಾತೆ: ಸಿಎಂ
ಸುಪ್ರೀಂ ನ್ಯಾಯಮೂರ್ತಿ ಬದಲಾವಣೆಗೆ ಗೌಡರ ಮನವಿ
ಮಾಧ್ಯಮಗಳಿಗೆ ಅಂಕುಶ ಹಾಕಲು ಚಿಂತನೆ: ಆಚಾರ್ಯ
ಲೋಕಸಭೆ: ಚುನಾವಣೆ ಉಸ್ತುವಾರಿಯಾಗಿ ನಾಯ್ಡು ಮೇಮಕ