ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಕೊಲೆ ಪ್ರಕರಣ: ಶಿವಾಚಾರ್ಯ ಸ್ವಾಮೀಜಿ ಬಂಧನ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಕೊಲೆ ಪ್ರಕರಣ: ಶಿವಾಚಾರ್ಯ ಸ್ವಾಮೀಜಿ ಬಂಧನ
ಚಿಕ್ಕಮಗಳೂರು ಚಿನ್ನಿಗ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷೆ ಹಾಗೂ ಮಠದ ಭಕ್ತೆಯೊಬ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶಿವಾಚಾರ್ಯ ಸ್ವಾಮೀಜಿ ಸೇರಿದಂತೆ ಮೂವರನ್ನು ಮಂಗಳವಾರ ಬಂಧಿಸಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಚಿಕ್ಕಮಗಳೂರು ಚಿನ್ನಿಗ ಗ್ರಾ.ಪಂ.ಉಪಾಧ್ಯಕ್ಷೆಯಾಗಿದ್ದ ಚಂದ್ರಾವತಿ ಅವರನ್ನು ಕಳೆದ ತಿಂಗಳು ಹತ್ಯೆಗೈಯಲಾಗಿತ್ತು. ಕೊಲೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಆರೋಪಿ ಶಿವಾಚಾರ್ಯ ಸ್ವಾಮೀಜಿ, ಮುನಾಫ್, ಫಾರೂಕ್ ಸೇರಿದಂತೆ ಮೂವರನ್ನು ಬಂಧಿಸಿದ್ದು, ಮತ್ತೊಬ್ಬ ಆರೋಪಿ ಲತೀಫ್‌ಗಾಗಿ ತೀವ್ರ ಶೋಧ ನಡೆಸುತ್ತಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

ಮಠದ ಭಕ್ತೆ ಶಿವಗಂಗಮ್ಮ ಅವರನ್ನು 2008 ಜೂನ್ 11 ರಂದು ಪೂಜೆ ಸಲ್ಲಿಸುತ್ತಿದ್ದ ಸಂದರ್ಭದಲ್ಲಿ ಸ್ವಾಮೀಜಿ ಅವರನ್ನು ಕೊಲೆ ಮಾಡಿ ಚಾರ್ಮಾಡಿ ಘಾಟ್ ನಲ್ಲಿ ಶವವನ್ನು ಬಿಸಾಡಿದ್ದರು. 2008 ಡಿಸೆಂಬರ್ 10 ರಂದು ಮೂಡಿಗೆರೆ ತಾಲ್ಲೂಕಿನ ಚಿನ್ನಿಗ ಪಂಚಾಯಿತಿ ಉಪಾಧ್ಯಕ್ಷೆ ಚಂದ್ರಾವತಿ ನಾಪತ್ತೆಯಾಗಿದ್ದರು. ಆ ಕೊಲೆಯನ್ನು ಸಹ ಸ್ವಾಮೀಜಿ ಹಾಗೂ ಅವರ ಸಹಚರರು ಮಾಡಿದ್ದಾರೆ ಎಂದು ಪೊಲೀಸ್ ತನಿಖೆಯಿಂದ ಬೆಳಕಿಗೆ ಬಂದಿತ್ತು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple, Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಆರ್ಥಿಕ ಹಿಂಜರಿತ ರಕ್ಷಣಾ ವಲಯಕ್ಕೆ ಧಕ್ಕೆಯಿಲ್ಲ: ಆಂಟನಿ
ಪ್ರೇಮಿಗಳಿಗೆ ರಕ್ಷಣೆ ನೀಡಿ-ಹೈಕೋರ್ಟ್‌ಗೆ ಮೊರೆ
ಗಣಿಗಾರಿಕೆ ಆದೇಶ ಹೈಕೋರ್ಟ್‌ನಿಂದ ವಜಾ
ಅಭಿವೃದ್ದಿ ಹಣ ವಿನಿಯೋಗಕ್ಕೆ ಪ್ರತ್ಯೇಕ ಲೆಕ್ಕ ಖಾತೆ: ಸಿಎಂ
ಸುಪ್ರೀಂ ನ್ಯಾಯಮೂರ್ತಿ ಬದಲಾವಣೆಗೆ ಗೌಡರ ಮನವಿ
ಮಾಧ್ಯಮಗಳಿಗೆ ಅಂಕುಶ ಹಾಕಲು ಚಿಂತನೆ: ಆಚಾರ್ಯ