ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಸಿದ್ದರಾಮಯ್ಯಗೆ ಪ್ರತಿಪಕ್ಷ ನಾಯಕ ಪಟ್ಟ ?
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಸಿದ್ದರಾಮಯ್ಯಗೆ ಪ್ರತಿಪಕ್ಷ ನಾಯಕ ಪಟ್ಟ ?
ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಧಾನಸಭೆಯ ಪ್ರತಿಪಕ್ಷ ಹುದ್ದೆಗೇರಿಸಲು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಸಮ್ಮತಿ ಸೂಚಿಸಿರುವುದಾಗಿ ಪಕ್ಷದ ಮೂಲಗಳು ತಿಳಿಸಿವೆ.

ಕಾಂಗ್ರೆಸ್ ಸೇರಿದಂದಿನಿಂದ ಸೂಕ್ತ ಸ್ಥಾನಮಾನ ನೀಡದಿರುವ ಬಗ್ಗೆ ಅಸಮಾಧಾನಗೊಂಡಿರುವ ಸಿದ್ದರಾಮಯ್ಯನವರ ಸ್ಥಾನದ ಕುರಿತು ಗಂಭೀರ ಚಿಂತನೆ ನಡೆಸಿರುವ ಕಾಂಗ್ರೆಸ್ ಬಜೆಟ್ ಅಧಿವೇಶನದ ಆರಂಭಕ್ಕೂ ಮುನ್ನ ನೇಮಕ ಆದೇಶ ನೀಡುವ ಸಾಧ್ಯತೆಗಳಿವೆ.

ಈ ಹಿನ್ನೆಲೆಯಲ್ಲಿ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಲೋಕಸಭಾ ಚುನಾವಣೆಯಲ್ಲಿ ಗುಲ್ಬರ್ಗಾದಿಂದ ಸ್ಪರ್ಧಿಸಲು ಟಿಕೆಟ್ ನೀಡುವ ಕುರಿತು ಕಾಂಗ್ರೆಸ್ ಚಿಂತನೆ ನಡೆಸಿದೆ.

ಇದೇ ವೇಳೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸಾಧ್ಯತೆ ಬಗ್ಗೆ ಸಿದ್ದರಾಮಯ್ಯಗೆ ಹೈಕಮಾಂಡ್ ಮನವರಿಕೆ ಮಾಡಿಕೊಟ್ಟಿದೆ. ಲೋಕಸಭೆ ಚುನಾವಣೆ ಹೊಂದಾಣಿಕೆಗೆ ತಕರಾರಿಲ್ಲ. ಆದರೆ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿ ಮುಂದುವರಿಯಬಾರದು ಎಂಬ ಷರತ್ತನ್ನು ಸಿದ್ದರಾಮಯ್ಯ ಹಾಕಿದ್ದಾರೆನ್ನಲಾಗಿದೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple, Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಶ್ರುತಿ ಪ್ರಕರಣದಲ್ಲಿ ಸಿಪಿಎಂ ಕೈವಾಡವಿಲ್ಲ
ಕೊಲೆ ಪ್ರಕರಣ: ಶಿವಾಚಾರ್ಯ ಸ್ವಾಮೀಜಿ ಬಂಧನ
ಆರ್ಥಿಕ ಹಿಂಜರಿತ ರಕ್ಷಣಾ ವಲಯಕ್ಕೆ ಧಕ್ಕೆಯಿಲ್ಲ: ಆಂಟನಿ
ಪ್ರೇಮಿಗಳಿಗೆ ರಕ್ಷಣೆ ನೀಡಿ-ಹೈಕೋರ್ಟ್‌ಗೆ ಮೊರೆ
ಗಣಿಗಾರಿಕೆ ಆದೇಶ ಹೈಕೋರ್ಟ್‌ನಿಂದ ವಜಾ
ಅಭಿವೃದ್ದಿ ಹಣ ವಿನಿಯೋಗಕ್ಕೆ ಪ್ರತ್ಯೇಕ ಲೆಕ್ಕ ಖಾತೆ: ಸಿಎಂ