ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಪ್ರೇಮಿಗಳ ದಿನ: ಮುತಾಲಿಕ್ ಮತ್ತೆ ಬಂಧನ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಪ್ರೇಮಿಗಳ ದಿನ: ಮುತಾಲಿಕ್ ಮತ್ತೆ ಬಂಧನ
ಬಿಜೆಪಿ ವಿರುದ್ಧ ಮುತಾಲಿಕ್ ಕಿಡಿ...
ಪ್ರೇಮಿಗಳ ದಿನಾಚರಣೆಗೆ ಅವಕಾಶ ನೀಡುವುದಿಲ್ಲ ಎಂದು ಗುಡುಗಿದ್ದ ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರನ್ನು ಮುಂಜಾಗ್ರತಾ ಕ್ರಮದ ಅಂಗವಾಗಿ ಶುಕ್ರವಾರ ಸಂಜೆ ಮತ್ತೆ ಬಂಧಿಸಲಾಗಿದೆ.

ಹುಮ್ನಾಬಾದ್‌ನಲ್ಲಿರುವ ಮಾಣಿಕ್ ನಗರ ಆಶ್ರಮವೊಂದಕ್ಕೆ ಆಗಮಿಸಿದ್ದ ಅವರನ್ನು ಕಮಲಾನಗರ ಪೊಲೀಸರು ಮುತಾಲಿಕ್ ಅವರನ್ನು ಮತ್ತೆ ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ.

ವ್ಯಾಲೆಂಟೈನ್ಸ್ ಡೇ (ಫೆ.14)ರಂದು ಕಾಣಸಿಗುವ ಜೋಡಿಗಳಿಗೆ ಸ್ಥಳದಲ್ಲೇ ಮದುವೆ ಮಾಡಿಸುವುದಾಗಿ ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮದ ಅಂಗವಾಗಿ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಶ್ರೀರಾಮಸೇನೆಯ ಬೆದರಿಕೆಯ ಪರಿಣಾಮ ಬೆಂಗಳೂರಿನಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಸೇನೆಯ ಕಾರ್ಯಕರ್ತರ ಮೇಲೆ ಕಣ್ಗಾವಲಿಡಲಾಗಿದೆ. ಅಲ್ಲದೇ ಶಾಂತಿ ಭಂಗ ಉಂಟುಮಾಡುವವರ ವಿರುದ್ಧ ಕ್ರಮಕೈಗೊಳ್ಳುವಂತೆ ಈಗಾಗಲೇ ಸರ್ಕಾರ ಪೊಲೀಸ್ ಇಲಾಖೆಗೆ ಸೂಚನೆ ನೀಡಿರುವುದಾಗಿ ಹೇಳಿದೆ.

ಬಿಜೆಪಿ ವಿರುದ್ಧ ಮುತಾಲಿಕ್ ಆಕ್ರೋಶ: ಪ್ರೇಮಿಗಳ ದಿನಾಚರಣೆಗೆ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿರುವ ಮುತಾಲಿಕ್‌ ಅವರ ಮನೆಗೆ ಪಿಂಕ್ ಚಡ್ಡಿ ಕಳುಹಿಸಿರುವ ಕುರಿತು ಮಾತನಾಡಲು ನಿರಾಕರಿಸಿದ ಅವರು ಮಾಧ್ಯಮಗಳ ವಿರುದ್ಧ ಹರಿಹಾಯ್ದರು, ತನ್ನನ್ನು ಅನಾವಶ್ಯಕವಾಗಿ ರಾಷ್ಟ್ರಮಟ್ಟದಲ್ಲಿ ಅಪರಾಧಿ ಎಂಬಂತೆ ಬಿಂಬಿಸಲಾಗುತ್ತಿದೆ ಎಂದು ಕಿಡಿಕಾರಿದರು.

ಅಲ್ಲದೇ ಆಡಳಿತಾರೂಢ ಬಿಜೆಪಿ ಕೂಡ ತನ್ನನ್ನು ಗುರಿಯಾಗಿಸಿಕೊಂಡು ಬಂಧನಕ್ಕೆ ಮುಂದಾಗುತ್ತಿದೆ. ಆ ನಿಟ್ಟಿನಲ್ಲಿ ಭಾರತೀಯ ಜನತಾ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದಾಗಿ ಆಕ್ರೋಶ ವ್ಯಕ್ತಪಡಿಸಿದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple, Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಕಾನೂನು ಕೈಗೆತ್ತಿಕೊಂಡರೆ-ಕ್ರಮ ಕೈಗೊಳ್ಳಿ: ಹೈಕೋರ್ಟ್
ಹೋರಾಟ ನಿಲ್ಲೋದಿಲ್ಲ: ಡಿ.ಕೆ.ಶಿವಕುಮಾರ್
ಮುತಾಲಿಕ್ ಮನೆ ತುಂಬಾ 'ಪಿಂಕ್ ಚಡ್ಡಿ' ರಾಶಿ!
ಕನ್ನಡ ಚಿತ್ರರಂಗ-75: ಸರ್ಕಾರದಿಂದ ನೆರವು
ಬಂಗಾರಪ್ಪ ಆಗಮನಕ್ಕೆ ಆಕ್ಷೇಪ ಇಲ್ಲ: ಮೊಯ್ಲಿ
ರೈಲ್ವೆ ಬಜೆಟ್-ರಾಜ್ಯಕ್ಕೆ ಅನ್ಯಾಯ: ಅನಂತ್ ಕುಮಾರ್