ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಶೀಘ್ರವೇ ಮಂಗಳೂರಿಲ್ಲಿ ಸಿಇಟಿ ಕೌನ್ಸೆಲಿಂಗ್: ಲಿಂಬಾವಳಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಶೀಘ್ರವೇ ಮಂಗಳೂರಿಲ್ಲಿ ಸಿಇಟಿ ಕೌನ್ಸೆಲಿಂಗ್: ಲಿಂಬಾವಳಿ
ಈ ವರ್ಷ ಹುಬ್ಬಳ್ಳಿ ಹಾಗೂ ಗುಲ್ಬರ್ಗಾದಲ್ಲಿ ಸಿಇಟಿ ಕೌನ್ಸೆಲಿಂಗ್ ಕೇಂದ್ರ ತೆರೆಯಲಾಗಿದ್ದು, ಮುಂದಿನ ವರ್ಷದಿಂದ ಮಂಗಳೂರಿನಲ್ಲಿ ಆರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ.

ನಗರದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ 2009ನೇ ಸಾಲಿನ ಸಿಇಟಿ ಕೈಪಿಡಿ ಬಿಡುಗಡೆ ಮಾಡಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಈ ವರ್ಷ ಪ್ರಯೋಗಾತ್ಮಕವಾಗಿ ಎರಡು ಹೊಸ ಕೇಂದ್ರಗಳಲ್ಲಿ ಕೌನ್ಸೆಲಿಂಗ್ ನಡೆಸಬೇಕೆಂಬ ಬೇಡಿಕೆಯಿದ್ದು ಮುಂದಿನ ವರ್ಷ ಅದು ಈಡೇರಲಿದೆ ಎಂದರು.

ರಾಜಧಾನಿಯಿಂದ ದೂರವಿರುವ ಪ್ರದೇಶಗಳ ವಿದ್ಯಾರ್ಥಿಗಳು ಕೌನ್ಸಿಲಿಂಗ್‌ಗೆ ಬೆಂಗಳೂರಿಗೆ ಬರುವುದನ್ನು ತಪ್ಪಿಸಿ ಎಂಬುದು ಪ್ರಾದೇಶಿಕವಾಗಿ ಕೌನ್ಸೆಲಿಂಗ್ ಮಾಡಬೇಕೆಂಬುದು ಬಹಳ ವರ್ಷದ ಬೇಡಿಕೆಯಾಗಿತ್ತು. ಈ ನಿಟ್ಟಿನಲ್ಲಿ ಈ ವರ್ಷ ಪ್ರಾಯೋಗಾತ್ಮಕವಾಗಿ ಹುಬ್ಬಳ್ಳಿ ಮತ್ತು ಗುಲ್ಬರ್ಗಾದಲ್ಲಿ ಕೌನ್ಸೆಲಿಂಗ್ ಮಾಡಲಾಗುವುದು. ಇದರ ಯಶಸ್ಸು ಹಾಗೂ ಉಂಟಾಗಬಹುದಾದ ಸಮಸ್ಯೆಗಳನ್ನು ಗಮನಿಸಿ ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು ಎಂದು ಅವರು ತಿಳಿಸಿದರು.

ಈ ಸಾಲಿನಲ್ಲಿ ಅನೇಕ ಹೊಸ ಇಂಜಿನಿಯರ್ ಕಾಲೇಜುಗಳು ಆರಂಭವಾಗುವ ಹಿನ್ನೆಲೆಯಲ್ಲಿ ಇಂಜಿಯರಿಂಗ್ ಸೀಟುಗಳ ಸಂಖ್ಯೆ ಹೆಚ್ಚಳವಾಗಲಿದೆ. ಕಾರವಾರದಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜನ್ನು ಇಂಜಿನಿಯರಿಂಗ್ ಕಾಲೇಜಾಗಿ ಪರಿವರ್ತಿತವಾಗಲು ಎಐಸಿಸಿಟಿ ಅನುಮೋದನೆ ನೀಡಿದೆ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple, Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಭ್ರಷ್ಟಾಚಾರ ತಡೆಗೆ ಸರ್ಕಾರಗಳು ವಿಫಲ: ಹೆಗ್ಡೆ
ಮುತಾಲಿಕ್, ಠಾಕ್ರೆಯನ್ನು ಹುಚ್ಚಾಸ್ಪತ್ರೆಗೆ ಸೇರಿಸಿ: ಅಗ್ನಿ
ಪ್ರೇಮಿಗಳ ದಿನಾಚರಣೆ: ಎಲ್ಲೆಡೆ ಬಿಗಿ ಭದ್ರತೆ
ನಿಶಾ ಸುಸನ್‌ಗೆ ಸೀರೆ,ಬಳೆ ರವಾನೆ: ದುರ್ಗಾಸೇನೆ
ಹೆಚ್ಚುವರಿ ಬೆಲೆ ನಿಗದಿ ಅಧಿಕಾರ ರಾಜ್ಯಕ್ಕಿಲ್ಲ: ಹೈಕೋರ್ಟ್
ರೈಲ್ವೆ ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯ: ಮುಖ್ಯಮಂತ್ರಿ