ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಸಚಿವೆ ರೇಣುಕಾ ವಿರುದ್ಧ ಕ್ರಿಮಿನಲ್ ಮೊಕದ್ದಮೆ: ಹೆಗ್ಡೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಸಚಿವೆ ರೇಣುಕಾ ವಿರುದ್ಧ ಕ್ರಿಮಿನಲ್ ಮೊಕದ್ದಮೆ: ಹೆಗ್ಡೆ
ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ರೇಣುಕಾ ಚೌಧುರಿ ವಿರುದ್ಧ ಮಂಗಳೂರಿನ ನ್ಯಾಯಾಲಯದಲ್ಲಿ ಕ್ರಿಮಿನಲ್ ಕೇಸು ದಾಖಲಿಸಲು ನ್ಯಾಯವಾದಿ ಪಿ.ಪಿ. ಹೆಗ್ಡೆ ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.

ಮಂಗಳೂರು ತಾಲಿಬಾನೀಕರಣವಾಗುತ್ತಿದೆ ಎಂದು ಆರೋಪಿಸಿದ ಸಚಿವೆ ಚೌಧುರಿ ವಿರುದ್ಧ ಮಂಗಳೂರಿನ ಮೇಯರ್ ಹಾಗೂ ಇತರರು ಸಲ್ಲಿಸಿದ್ದ ನೋಟಿಸ್‌‌ಗೆ 3 ದಿನಗಳಾದರೂ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಸೋಮವಾರ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಸಚಿವರು ತಮ್ಮ ಹೇಳಿಕೆಯನ್ನು ಹಿಂತೆಗೆದುಕೊಳ್ಳಬೇಕು ಮತ್ತು ಮಂಗಳೂರಿನ ಜನತೆಯ ಕ್ಷಮೆ ಯಾಚಿಸಬೇಕೆಂದು ಮೇಯರ್ ಹಾಗೂ ಇತರರು ತಮಗೆ ವಿನಂತಿಸಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಮೂರು ದಿನಗಳ ಹಿಂದೆಯೇ ಸಚಿವರಿಗೆ ಇ-ಮೇಲ್ ಮತ್ತು ಫ್ಯಾಕ್ಸ್ ಮೂಲಕ ನೋಟಿಸ್ ಕಳಿಸಿರುವುದಾಗಿ ಅವರು ತಿಳಿಸಿದರು.

ಆದರೆ ಮೂರು ದಿನಗಳಾದರೂ ಯಾವುದೇ ಪ್ರತಿಕ್ರಿಯೆಗಳು ಬಾರದ ಹಿನ್ನೆಲೆಯಲ್ಲಿ ಸೋಮವಾರದಂದು ಸಚಿವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ನ್ಯಾಯಾಲಯದಲ್ಲಿ ಕೋರಲಾಗುವುದು ಎಂದು ಅವರು ತಿಳಿಸಿದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple, Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಅಶ್ವಿನಿ ಆತ್ಮಹತ್ಯೆ ಪ್ರಕರಣ:ಸಿಓಡಿ ತನಿಖೆ ಆರಂಭ
ಸಚಿವರ ಎದುರೇ ಎಂಟು ಬಾಲ್ಯ ವಿವಾಹ !
ರೈಲ್ವೆ ಬಜೆಟ್‌ನಲ್ಲಿ ಅನ್ಯಾಯ: ಕರವೇ ಪ್ರತಿಭಟನೆ
ಮಾಧ್ಯಮಗಳ ವಿರುದ್ದ ನ್ಯಾಯಮೂರ್ತಿ ಕಿಡಿ
ಶೀಘ್ರವೇ ಮಂಗಳೂರಿಲ್ಲಿ ಸಿಇಟಿ ಕೌನ್ಸೆಲಿಂಗ್: ಲಿಂಬಾವಳಿ
ಭ್ರಷ್ಟಾಚಾರ ತಡೆಗೆ ಸರ್ಕಾರಗಳು ವಿಫಲ: ಹೆಗ್ಡೆ