ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ರೈಲ್ವೇ ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯ: ಒಪ್ಪಿದ ಕೃಷ್ಣ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ರೈಲ್ವೇ ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯ: ಒಪ್ಪಿದ ಕೃಷ್ಣ
ಲೋಕಸಭೆಗೆ ಸ್ಪರ್ಧೆ ಇಲ್ಲ, ಜೆಡಿಎಸ್ ಜತೆ ಮೈತ್ರಿ ಅಗತ್ಯವಿಲ್ಲ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ತಾವು ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ, ರೈಲ್ವೇ ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ ಎಂಬುದನ್ನು ಒಪ್ಪಿಕೊಂಡಿದ್ದಾರಲ್ಲದೆ, ಇದು ಲೋಕಸಭೆ ಚುನಾವಣೆ ಮೇಲೂ ಪರಿಣಾಮ ಬೀರಬಹುದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈಲ್ವೆ ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿರುವುದನ್ನು ನಾನು ಒಪ್ಪಿಕೊಳ್ಳುತ್ತೇನೆ. ಇದು ಮುಂದಿನ ಲೋಕಸಭಾ ಚುನಾವಣೆಗೆ ಪರಿಣಾಮ ಬೀರುವ ಅಂಶವಾಗಿದೆ. ಈ ಬಗ್ಗೆ ಸ್ವತಃ ರೈಲ್ವೆ ಸಚಿವ ಲಾಲೂ ಪ್ರಸಾದ್ ಅವರೇ ಸರಿಪಡಿಸಬೇಕಿದೆ. ಕಾಂಗ್ರೆಸ್ ಐದು ವರ್ಷಗಳ ಸ್ಥಿರ ಆಡಳಿತ ನೀಡಿದೆ. ಸೋನಿಯಾ ಮತ್ತು ಮನಮೋಹನ್ ಸಿಂಗ್ ನಾಯಕತ್ವ ಹಾಗೂ ಸರ್ಕಾರದ ಅಭಿವೃದ್ದಿ ಕಾರ್ಯವನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸುವುದಾಗಿ ಹೇಳಿದರು.

ಅಲ್ಲದೆ, ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಆಕಾಂಕ್ಷೆ ತಮಗಿಲ್ಲ. ಈ ಬಗ್ಗೆ ಹೈಕಮಾಂಡ್‌ನಿಂದ ಇದುವರೆಗೆ ಯಾವುದೇ ಸೂಚನೆಯೂ ಬಂದಿಲ್ಲ ಎಂದು ತಿಳಿಸಿದ್ದಾರೆ.

ರಾಜ್ಯದ 28 ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸುವುದು ಕೆಪಿಸಿಸಿಗೆ ಬಿಟ್ಟಿದ್ದು. ಅದನ್ನು ಪಕ್ಷದ ವರಿಷ್ಠರು ಅಂತಿಮಗೊಳಿಸುತ್ತಾರೆ. ಮಂಡ್ಯ ಕ್ಷೇತ್ರ ಸೇರಿದಂತೆ ಯಾವುದೇ ಕ್ಷೇತ್ರದಿಂದಲೂ ಸ್ಪರ್ಧಿಸಲು ನನಗೆ ಆಸಕ್ತಿಯಿಲ್ಲ ಎಂದು ಅವರು ತಿಳಿಸಿದ್ದಾರೆ.

ಜೆಡಿಎಸ್ ಮೈತ್ರಿ ಅನಗತ್ಯ: ಇದೇ ವೇಳೆ, ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಅನಿವಾರ್ಯತೆ ಕಾಂಗ್ರೆಸ್ಸಿಗಿಲ್ಲ. ಕಾಂಗ್ರೆಸ್ಸಿಗೆ ತನ್ನದೇ ಆದ ಶಕ್ತಿಯಿದೆ. ಅದರ ಆಧಾರದ ಮೇಲೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗಳಿಸುವ ವಿಶ್ವಾಸ ತಮಗಿದೆ ಎಂದು ಅವರು ಅಭಿಪ್ರಾಯಪಟ್ಟರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple, Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
25ರಂದು ಕಾಂಗ್ರೆಸ್ ಮೊದಲ ಪಟ್ಟಿ
ವೈಮಾನಿಕ ಪ್ರದರ್ಶನ: ಎಫ್-16 ಟಯರ್ ಸ್ಫೋಟ
ಆರ್‌ವಿ, ಡಿಕೆಶಿ, ಸಿದ್ದುಗೆ ಹೈಕಮಾಂಡ್ ಬುಲಾವ್
ದಾಳಿ: ಚಿತ್ರ ನಿರ್ಮಾಪಕರ ವಿರುದ್ಧ ದೂರು
ನ್ಯಾಯಾಂಗ ವ್ಯವಸ್ಥೆಯ ಸಮಸ್ಯೆ: ದಿನಕರನ್ ಅಸಮಾಧಾನ
ಬಳ್ಳಾರಿ: ರೈತರ ಮೇಲೆ ಲಾಠಿ ಪ್ರಹಾರ