ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ರೈತರನ್ನೇ ಹತ್ತಿಕ್ಕುತ್ತಿರುವ ಬಿಜೆಪಿ: ದೇಶಪಾಂಡೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ರೈತರನ್ನೇ ಹತ್ತಿಕ್ಕುತ್ತಿರುವ ಬಿಜೆಪಿ: ದೇಶಪಾಂಡೆ
ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಬಳ್ಳಾರಿ ರೈತರ ಮೇಲೆ ಲಾಠಿ ಪ್ರಹಾರ ನಡೆಸಿರುವುದು ಪ್ರಜಾಪ್ರಭುತ್ವದಲ್ಲಿ ಕಪ್ಪುಚುಕ್ಕೆ ಎಂದು ಕೆಪಿಸಿಸಿ ಅಧ್ಯಕ್ಷ ಆರ್.ವಿ.ದೇಶಪಾಂಡೆ ಟೀಕಿಸಿದ್ದಾರೆ.

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಸ್ವಲ್ಪ ದಿನದಲ್ಲೇ ಹಾವೇರಿಯಲ್ಲಿ ರೈತರ ಮೇಲೆ ಗೋಲಿಬಾರ್ ಮಾಡಿತು. ಈಗ ಬಳ್ಳಾರಿ ರೈತರ ಮೇಲೆ ದಬ್ಬಾಳಿಕೆ ನಡೆದಿದೆ. ವಿಮಾನ ನಿಲ್ದಾಣಕ್ಕೆ ಜಮೀನು ಕಳೆದುಕೊಂಡ ರೈತರ ಸಮಸ್ಯೆಯನ್ನು ಸಹನೆಯಿಂದ ಪರಿಶೀಲಿಸಿ ಪರಿಹಾರ ಕಂಡುಕೊಳ್ಳುವುದನ್ನು ಬಿಟ್ಟು ಲಾಠಿ ಪ್ರಹಾರ ನಡೆಸಿರುವುದು ವಿಷಾದನೀಯ ಎಂದು ಅವರು ಹೇಳಿದರು.

ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಪೊಲೀಸರ ಮೂಲಕ ಪ್ರತಿಭಟನೆ ಹಾಗೂ ಪ್ರತಿಭಟನಾಕಾರರನ್ನು ಹತ್ತಿಕ್ಕಲು ಹೊರಟಿರುವ ಸರ್ಕಾರಕ್ಕೆ ಲೋಕಸಭೆ ಚುನಾವಣೆಯಲ್ಲಿ ಜನ ತಕ್ಕ ಪಾಠ ಕಲಿಸುತ್ತಾರೆ ಎಂದು ಕಿಡಿಕಾರಿದ್ದಾರೆ.

ಕುಮಾರಸ್ವಾಮಿ ಪ್ರತಿಕ್ರಿಯೆ: ಬಳ್ಳಾರಿಯಲ್ಲಿ ರೈತರ ಮೇಲೆ ಲಾಠಿ ಪ್ರಹಾರ, ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆಯು ಬಿಜೆಪಿ ಸರ್ಕಾರ ನಡೆಸುತ್ತಿರುವ ಆಡಳಿತ ದೌರ್ಜನ್ಯವನ್ನು ಎತ್ತಿ ತೋರಿಸುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಕೃಷಿ ಭೂಮಿಯನ್ನು ಬಳಸಿಕೊಂಡು ಭೂಮಿಯನ್ನು ಬಂಜರು ಮಾಡುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple, Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಇನ್ಸ್‌‌ಪೆಕ್ಟರ್‌ಗೆ ಗುಂಡಿಕ್ಕಿ ಪೇದೆ ಆತ್ಮಹತ್ಯೆ
ಸಚಿವೆ ಚೌಧುರಿ ವಿರುದ್ಧ ಮೊಕದ್ದಮೆ ದಾಖಲು
ಲೋಕಸಭೆಗೆ ಸ್ಪರ್ಧೆ ಇಲ್ಲ: ಕೃಷ್ಣ
ಸರ್ಕಾರ ಮೊಸಳೆ ಕಣ್ಣೀರು ಹಾಕುತ್ತಿದೆ: ಉಗ್ರಪ್ಪ
ಬೆಂಗಳೂರು: 14 ಕುಖ್ಯಾತ ರೌಡಿಗಳ ಬಂಧನ
ಬೆಂಗಳೂರು: ದಂಪತಿ-ಮಗನ ಬರ್ಬರ ಹತ್ಯೆ