ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಮಂಗಳೂರು: ಮಾಜಿ ರೌಡಿ ಕ್ಯಾಂಡಲ್ ಸಂತು ಹತ್ಯೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಮಂಗಳೂರು: ಮಾಜಿ ರೌಡಿ ಕ್ಯಾಂಡಲ್ ಸಂತು ಹತ್ಯೆ
ನಗರದ ಹೊರವಲಯವಾದ ಪೊಳಲಿ ಸಮೀಪ ಮಾಜಿ ರೌಡಿಯೊಬ್ಬನನ್ನು ಹಾಡಹಗಲೇ ಬರ್ಬರವಾಗಿ ಹತ್ಯೆಗೈದ ಘಟನೆ ಬುಧವಾರ ಬೆಳಿಗೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಕಾರಿನಲ್ಲಿ ಆಗಮಿಸಿದ್ದ ಏಳು ಮಂದಿಯ ದುಷ್ಕರ್ಮಿಗಳ ತಂಡವೊಂದು ಪೊಳಲಿಯ ಬಡಕಬಯಲಿನಲ್ಲಿ ಮಾಜಿ ರೌಡಿ ಕ್ಯಾಂಡಲ್ ಸಂತುವನ್ನು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೈದಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.

ಪೊಳಲಿಯ ಬಡಕಬಯಲಿನಲ್ಲಿ ಹಾಡಹಗಲೇ ದುಷ್ಕರ್ಮಿಗಳು ನಡೆಸಿದ ಈ ಕೃತ್ಯದಿಂದ ಸ್ಥಳೀಯರು ಆತಂತಕ್ಕೆ ಒಳಗಾಗಿದ್ದು, ಇತ್ತೀಚೆಗೆ ಮಂಗಳೂರಿನಲ್ಲಿ ದಾಳಿ, ಬೆದರಿಕೆ ಘಟನೆ ಹೆಚ್ಚುತ್ತಿರುವ ಕುರಿತು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ, ಆರೋಪಿಗಳ ಸೆರೆಗೆ ತೀವ್ರ ಶೋಧ ನಡೆಸುತ್ತಿರುವುದಾಗಿ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple, Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಗುಲ್ಬರ್ಗಾ: ಮುತಾಲಿಕ್ ಬಿಡುಗಡೆ
ಆಪರೇಶನ್ ಕಮಲ ಪ್ರಜಾತಂತ್ರಕ್ಕೆ ಕಳಂಕ: ದೇಶಪಾಂಡೆ
ದೇವೇಗೌಡರ ವಿರುದ್ಧ ಕಪ್ಪು ಬಾವುಟ ಪ್ರದರ್ಶನ
ಕೆರೆಗಳನ್ನು ದುರಸ್ತಿಪಡಿಸಿ-ಹೈಕೋರ್ಟ್ ಆದೇಶ
ಹೈಕಮಾಂಡ್ ನಿರ್ಧಾರಕ್ಕೆ ಬದ್ದ: ಖರ್ಗೆ
ಯಾವುದೇ ನೋಟಿಸ್ ಬಂದಿಲ್ಲ: ರೇಣುಕಾ